ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ ವಿದೇಶದಿಂದ ಬರುವವರನ್ನು ರಾಜ್ಯಕ್ಕೆ ಕರೆಸಿಕೊಳ್ಳು ಫ್ರೀ ವಿಮಾನದ ವ್ಯವಸ್ಥೆ ಮಾಡಿದೆ. ಆದರೆ, ಬಡ ಕಾರ್ಮಿಕರು ರಾಜಧಾನಿ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕೆಎಸ್ ಆರ್ ಟಿಸಿ ದುಪ್ಪಟ್ಟು ದರ ವಸೂಲಿ ಮಾಡುತ್ತಿದೆ. ಸರ್ಕಾರದ ಈ ನಿರ್ಧಾರ ಒಂದು ಕಣ್ಣಲ್ಲಿ ಬೆಣ್ಣೆ ಇನ್ನೊಂದು ಕಣ್ಣಲ್ಲಿ ಸುಣ್ಣ ಎನ್ನುವಂತಾದಿದೆ.
ವಿದೇಶದಿಂದ ಬಂದವರನ್ನು ಉಚಿತವಾಗಿ ರಾಜ್ಯಕ್ಕೆ ಕರೆದುಕೊಂಡು ಬರುದಷ್ಟೇ ಅಲ್ಲದೆ, ಅವರಿಗೆ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಮುಂಜಾಗೃತ ವ್ಯವಸ್ಥೆ ಕಲ್ಪಿಸಲಿದೆ. ಆದರೆ, ಕೂಲಿ ಕಾರ್ಮಿಕರು ರೆಡ್ ಝೋನ್ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಸಿದ್ಧವಾಗಿದ್ದರೂ, ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ.
ಇನ್ನು ಬೆಂಗಳೂರಿನ ರೆಡ್ ಝೋನ್ ನಲ್ಲಿ ಇದ್ದರೂ, ರೆಡ್ ಝೋನ್ ನಿಂದ ಬೇರೆ ಬೇರೆ ವಲಕ್ಕೆ ಹೋಗುವರಿಗೆ ಯಾವುದೇ ವ್ಯವಸ್ಥೆ ಮಾಡಲಾಗಿಲ್ಲ. ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬಸ್ ಗಳಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಇದರಿಂದ ರೋಗ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿ
ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸರ್ಕಾವೇ ನೇರವಾಗಿ ಕಾರ್ಮಿಕರ ಊರುಗಳಿಗೆ ಕರೆದುಕೊಂಡು ಹೋಗಿ ಅವರ ಊರಿಗೆ ಬಿಟ್ಟು ಬರಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.



