Connect with us

Dvgsuddi Kannada | online news portal | Kannada news online

ಬೆಂಗಳೂರು ಲಾಕ್ ಡೌನ್ ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡ; ರಾಜ್ಯ ಸಂಪೂರ್ಣ ಲಾಕ್ ಡೌನ್ ಗೆ ಆಗ್ರಹ

ಪ್ರಮುಖ ಸುದ್ದಿ

ಬೆಂಗಳೂರು ಲಾಕ್ ಡೌನ್ ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡ; ರಾಜ್ಯ ಸಂಪೂರ್ಣ ಲಾಕ್ ಡೌನ್ ಗೆ ಆಗ್ರಹ

ಡಿವಿಜಿ ಸುದ್ದಿ, ಬೆಂಗಳೂರುಕೊರೊನಾ ವ್ಯಾಪಕವಾಗಿ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರವು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದುವಾರ  ಲಾಕ್ ಡೌನ್ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಅದೇ ರೀತಿ ಇಡೀ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಜನತೆಯಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ನಮಗೆ ಆರೋಗ್ಯವೇ ಭಾಗ್ಯ. ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ದಯವಿಟ್ಟು ಮಾಸ್ಕ್ ಧರಿಸಿ. ಅಂತರ ಕಾಯ್ದುಕೊಳ್ಳಿ. ಏನೇ ಮುಟ್ಟಬೇಕಾದರೂ ಸ್ಯಾನಿಟೈಸರ್‌ನಿಂದ ಕೈ  ಸ್ವಚ್ಛ ಗೊಳಿಸಿಕೊಳ್ಳಿ. ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ಮನವಿ ಮಾಡಿದ್ದಾರೆ.

ಈ ವೈರಸ್ಸನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜ್  ಘೋಷಿಸಿದೆ. ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಆಪಾದಿಸಿದ್ದಾರೆ. ಅದು ಏನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆಮಾಡಲಿ. ಈಗ ನಮಗೆ ಜನತೆಯ ಆರೋಗ್ಯ ಮುಖ್ಯ. ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ ಎಂದರಿದ್ದಾರೆ.

ಸರ್ಕಾರವು ಸಹ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ನಾವೆಲ್ಲ ಜೊತೆಗಿದ್ದೀವೆ. ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ದಯವಿಟ್ಟು ಇನ್ನು ಮುಂದಾದರೂ ಎಚ್ಚೆತ್ತು ಕೆಲಸ ಮಾಡಿ ಎಂದು ಮನವಿ ಮಾಡುತ್ತೀನೆ ಎಂದು ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top