ನವದೆಹಲಿ: ಕೊರೊನಾ ವೈರಸ್ ಪರಿಣಾಮ ಲಾಕ್ ಡೌನ್ ಹಿನ್ನೆಲೆ ರಾಜ್ಯದಲ್ಲಿ ಅಪಾರ ನಷ್ಟ ಉಂಟಾಗಿದ್ದು, ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ 2 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ನೀಡಬೇಕು ಎಂದು ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಲಾಕ್ ಡೌನ್ ಸ್ಥಿತಿಗತಿ ಕುರಿತು ಎಲ್ಲ ರಾಜ್ಯ ಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ತಮಿಳುನಾಡು ಸಿಎಂ ಪಳನಿಸ್ವಾಮಿ ಮನವಿ ಮಾಡಿದರು. ಜೊತೆಗೆ ಕೇಂದ್ರ ಸರ್ಕಾರ ರಾಜ್ಯದ ಪಾಲಿಗೆ ನೀಡಬೇಕಿದ್ದ ಜಿಎಸ್ ಟಿ ಹಣವನ್ನು ನೀಡುವಂತೆ ಆಗ್ರಹಿಸಿದ್ದಾರೆ. ಹಾಗೆಯೇ ಲಾಕ್ ಡೌನ್ ಪರಿಹಾರ ನಿಧಿಗೆ ಕಾರ್ಪೋರೆಟ್ ವಲದ ಸಿಎಸ್ ಆರ್ ಫಂಡ್ ಕಕೂಡ ಬಳಸಿಕೊಳ್ಳಲು ಅವಕಾಶಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.




