Connect with us

Dvgsuddi Kannada | online news portal | Kannada news online

ಕೊರೊನಾ ವೈರಸ್ ನಿಂದ ಸಾವು: ಜೀವ ವಿಮೆ ಪರಿಹಾರಕ್ಕೆ ಅರ್ಹ

ಪ್ರಮುಖ ಸುದ್ದಿ

ಕೊರೊನಾ ವೈರಸ್ ನಿಂದ ಸಾವು: ಜೀವ ವಿಮೆ ಪರಿಹಾರಕ್ಕೆ ಅರ್ಹ

ನವದೆಹಲಿ: ಜೀವ ವಿಮೆ ಪಾಲಿಸಿ ಖರೀದಿಸಿದವರು ಒಂದು ವೇಳೆ ಕೊರೊನಾ ವೈರಸ್ ನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ಮರಣ ಪರಿಹಾರ ಕೊಡುವುದು ಎಲ್ಲ ಜೀವ ವಿಮೆ ಕಂಪನಿಗಳ ಕರ್ತವ್ಯವಾಗಿದೆ ಎಂದು ಜೀವ ವಿಮೆ ಮಂಡಳಿಯು ತಿಳಿಸಿದೆ.

ಕೊರೊನಾ ಯಾವುದೇ ಸಾವಿನ ಪ್ರಕರಣಗಳ ಕ್ಲೇಮ್‌ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ಪರಿಹಾರ ಧನ ವಿತರಿಸಲು ಸರ್ಕಾರಿ ಮತ್ತು ಖಾಸಗಿ ವಿಮೆ ಕಂಪನಿಗಳು ಬದ್ಧವಾಗಿರಬೇಕು. ಇಂತಹ ಸಾವಿನ ಕ್ಲೇಮ್‌ ಪ್ರಕರಣಗಳಲ್ಲಿ ಅನಿರೀಕ್ಷಿತ ಸಂದರ್ಭ ನಿಯಮವು ಅನ್ವಯಗೊಳ್ಳುವುದಿಲ್ಲ ಎಂದು ಮಂಡಳಿಯು ಹೇಳಿಕೆಯಲ್ಲಿ ತಿಳಿಸಿದೆ.

ಎಲ್ಲ ವಿಮೆ ಕಂಪನಿಗಳು ತಮ್ಮ ಗ್ರಾಹಕರಿಗೆ ವೈಯಕ್ತಿಕವಾಗಿ ಈ ಮಾಹಿತಿ ನೀಡಲು ಸೂಚಿಸಲಾಗಿದೆ.ಸದ್ಯದ ಬಿಕ್ಕಟ್ಟಿನ ಸಂದರ್ಭದಲ್ಲಿ ಜೀವ ವಿಮೆಯ ಎಲ್ಲ ಕಂಪನಿಗಳು ತಮ್ಮ ಗ್ರಾಹಕರ ಬೆಂಬಲಕ್ಕೆ ನಿಲ್ಲಬೇಕು. ತಪ್ಪು ಮಾಹಿತಿಗಳು ಗ್ರಾಹಕರಲ್ಲಿ ಗೊಂದಲ ಮೂಡಿಸಬಾರದು ಎಂದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top