ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್ ಮುಗಿಯುವ ವರೆಗೂ ಮದ್ಯ ಸಿಗಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿ ತೀರ್ಮಾನವೇ ಅಂತಿಮ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ದೇಶದಾದ್ಯಂತ ಲಾಕ್ ಡೌನ್ ಹೇರಲಾಗಿದೆ. ರಾಜ್ಯದಲ್ಲಿಯೂ ಕೂಡ ಲಾಕ್ ಡೌನ್ ನಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಕೊರೊನಾ ವೈರಸ್ ಹೆಚ್ಚಾಗುವ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಲಾಕ್ ಡೌನ್ ತೆರವುಗೊಳ್ಳುವ ವರೆಗೂ ಮದ್ಯ ಮಾರಾಟ ನಿಷೇಧ ಮುಂದುವರಿಯಲಿದೆ. ಮದ್ಯ ನಿಷೇಧದಿಂದ ಯಾರು ಸತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



