Connect with us

Dvgsuddi Kannada | online news portal | Kannada news online

ಕೊರೊನಾ ವಿರುದ್ಧದ ಹೋರಾಟಕ್ಕೆ ಏ.5ರಂದು ರಾತ್ರಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ಪ್ರಮುಖ ಸುದ್ದಿ

ಕೊರೊನಾ ವಿರುದ್ಧದ ಹೋರಾಟಕ್ಕೆ ಏ.5ರಂದು ರಾತ್ರಿ ದೀಪ ಬೆಳಗಿಸಿ: ಪ್ರಧಾನಿ ಮೋದಿ ಕರೆ

ನವದೆಹಲಿ: ಡೆಡ್ಲಿ ಕೊರೊನಾ ವೈರಸ್ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ. ಹೀಗಾಗಿ ಏಪ್ರಿಲ್ 5 ರಂದು ಭಾನುವಾರ  ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಎಲ್ಲರೂ ನಿಮ್ಮ ಮನೆಯ  ಲೈಟ್ ಆಫ್ ಮಾಡಿ ದೀಪ ಬೆಳಗಿಸಿ ಎಂದು ಪ್ರಧಾನಿ ಮೋದಿ ಅವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ಏಪ್ರಿಲ್ 5ಕ್ಕೆ ಎಲ್ಲರೂ ಒಟ್ಟಾಗೋಣ. ಮಹಾ ಶಕ್ತಿಯ ಜಾಗೃತಿ ಆಗಬೇಕಿದೆ. ಹೀಗಾಗಿ ರಾತ್ರಿ 9 ಗಂಟೆಗೆ ದೀಪ, ಮೇಣದ ಬತ್ತಿ, ಟಾರ್ಚ್, ಮೊಬೈಲ್ ಟಾರ್ಚ್ ಬೆಳಗಿಸಬೇಕು. ಆ ಬೆಳಕಿನಲ್ಲಿ ನಮ್ಮ ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಳ್ಳಬೇಕು. ನಾವು ಇಬ್ಬರೇ ಇಲ್ಲ, ಎಲ್ಲರೂ ಒಗ್ಗಟಾಗಿದ್ದೇವೆ ಎನ್ನುವ ಸಂಕಲ್ಪ ಮಾಡಬೇಕು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮೋದಿ ಮತ್ತೊಮ್ಮೆ ಜನರಿಗೆ ಕರೆ ಕೊಟ್ಟಿದ್ದಾರೆ.

ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸುತ್ತಿದೆ. ಇಡೀ ದೇಶದಲ್ಲಿ ಲಾಕ್‍ಡೌನ್ ಮಾಡಿ 9 ದಿನ ಆಗಿದೆ. ಎಲ್ಲರೂ ಸಹಕಾರ ಕೊಟ್ಟು ಲಾಕ್‍ಡೌನ್‍ನನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ. ಜನತಾ ಕರ್ಫ್ಯೂಗೂ ಬೆಂಬಲ ಕೊಟ್ಟಿದ್ದೀರಿ. ಸಂಕಷ್ಟದ ಹೊತ್ತಲ್ಲಿ ಸಾಮೂಹಿಕವಾಗಿ ಶಕ್ತಿ ಪ್ರದರ್ಶನ ಮಾಡಬೇಕಿದೆ.  ಹೀಗಾಗಿ  ಕೊರೊನಾ ವಿರುದ್ಧ ಹೋರಾಟಕ್ಕೆ ಎಲ್ಲರ ಸಹಕಾರಕ್ಕೆ  ಧನ್ಯವಾದಗಳು.

ಕೋಟ್ಯಂತರ ಜನರು ಮನೆಯಲ್ಲಿದ್ದಾರೆ. ಎಲ್ಲರಿಗೂ ಮನೆಯಲ್ಲಿ ಕೂತು ಒಬ್ಬನೇ ಏನು ಮಾಡಬಹುದು ಅನಿಸಬಹುದು. ಮನೆಯಲ್ಲಿ ಹೀಗೆ ಎಷ್ಟು ದಿನ ಕಳೆಯಬೇಕು ಅನಿಸಬಹುದು. ಆದರೆ ಲಾಕ್‍ಡೌನ್ ಮುಖ್ಯ. ಇದು  ಹೋರಾಟ ಅಲ್ಲ. ಇದಕ್ಕೆ ಸಾಮೂಹಿಕ ಶಕ್ತಿಯ ಅವಶ್ಯಕತೆ ಇದೆ. ಜನತಾ ಜನಾರ್ದನ ಈಶ್ವರನಾ ರೂಪವಾಗಿದೆ. ಹೀಗಾಗಿ ಅಂದಕಾರದ ನಡುವೆ ನಾವು ಪ್ರಕಾಶಮಾನವಾಗಿರಬೇಕು. ನಮ್ಮ ಬಡವರು ಕೊರೊನಾ ನಿರಾಸೆಯಿಂದ ಸಂಕಷ್ಟ ನಡುವೆ ಆಶಾಕಿರಣವಾಗಿದ್ದಾರೆ. ಆದ್ದರಿಂದ ಕೊರೊನಾ ಅನ್ನೋ ಅಂಧಕಾರದಿಂದ ಬೆಳಕಿನತ್ತ ಹೋಗುತ್ತಿದ್ದೇವೆ ಎಂದರು.

ಎಲ್ಲರೂ ಲೈಟ್‍ಆಫ್ ಮಾಡಿ ದೀಪ ಬೆಳಗಿಸಿ. ಕೊರೊನಾ ಓಡಿಸಲು ಸಾಮಾಜಿಕ ಅಂತರವೇ ರಾಮಬಾಣ. ಯಾರೂ ಒಂಟಿಯಲ್ಲ. ನಾವೆಲ್ಲರೂ ಒಂದೇ ಅಂತ ಸಾರೋಣ. 130 ಕೋಟಿ ಜನರ ಮುಖಗಳನ್ನು ನೆನಪಿಸಿಕೊಳ್ಳಿ. ಜೊತೆಗೆ ಗೆಲ್ಲಲು ಆತ್ಮವಿಶ್ವಾಸ ಬೆಳೆಸಿಕೊಳ್ಳಿ, ಉತ್ಸಾಹ ಎನ್ನುವುದು ದೊಡ್ಡ ಬಲ. ನಿಮ್ಮ ಸಹಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ದೇಶವಾಸಿಗಳಿಗೆ ನಮಸ್ಕಾರ ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top