Connect with us

Dvgsuddi Kannada | online news portal | Kannada news online

ಕೊರೊನಾ ಸೋಂಕು: ರಾಜ್ಯದಲ್ಲಿ 13ನೇ ಬಲಿ

ಪ್ರಮುಖ ಸುದ್ದಿ

ಕೊರೊನಾ ಸೋಂಕು: ರಾಜ್ಯದಲ್ಲಿ 13ನೇ ಬಲಿ

ಡಿವಿಜಿ ಸುದ್ದಿ, ಬೆಂಗಳೂರು: ಮಹಾಮಾರಿ ಕೊರೊನಾಗೆ ಬೆಂಗಳೂರಿನ 66 ವರ್ಷದ ವ್ಯಕ್ತಿಯೊಬ್ಬ ಗುರುವಾರ ಬಲಿಯಾಗಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾದರೆ, ರಾಜ್ಯದಲ್ಲಿ ಒಟ್ಟಾರೆ 13 ಮಂದಿ ಬಲಿ ಪಡೆದುಕೊಂಡಿದೆ.

ಮೃತರಾದ ಬೆಂಗಳೂರಿನ ವ್ಯಕ್ತಿ   ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರನ್ನು ಏ.10ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಇತ್ತ ಮೈಸೂರಿನಲ್ಲಿ ಬುಧವಾರ ಒಂದೇ ದಿನ 10 ಪ್ರಕರಣಗಳು ವರದಿಯಾಗಿದ್ದು, ಚಿಕ್ಕಬಳ್ಳಾಪುರದ 65 ವರ್ಷದ ವ್ಯಕ್ತಿ ಹಾಗೂ ಬೆಳಗಾವಿಯ 80 ವರ್ಷದ ವೃದ್ಧೆ ಕೋವಿಡ್‌–19ಕ್ಕೆ ಸಾವಿಗೀಡಾಗಿದ್ದರು.

ರಾಜ್ಯದಲ್ಲಿ ಬುಧವಾರ ಒಂದೇ ದಿನ 19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಂದೇ ದಿನ ಅತ್ಯಧಿಕ ಪ್ರಕರಣ ವರದಿಯಾದಂತಾಗಿದೆ. ಬೆಂಗಳೂನಲ್ಲಿ ಒಟ್ಟು 71 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 31 ಮಂದಿ ಗುಣಮುಖರಾಗಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top