Connect with us

Dvgsuddi Kannada | online news portal | Kannada news online

ಯಾರು ಕೂಡ ಬೆಂಗಳೂರು ಬಿಟ್ಟು ಹೋಗಬೇಡಿ: ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಮನವಿ

ರಾಜ್ಯ ಸುದ್ದಿ

ಯಾರು ಕೂಡ ಬೆಂಗಳೂರು ಬಿಟ್ಟು ಹೋಗಬೇಡಿ: ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಮನವಿ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿತ ಪ್ರಮಾಣ ಹೆಚ್ಚಳ ಹಿನ್ನೆಲೆ ಜನರು ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ಹೊರಟಿದ್ದಾರೆ. ಈ ಬಗ್ಗೆ ಇಂದು ಸಿಎಂ ಬಿ.ಎಸ್.  ಯಡಿಯೂರಪ್ಪ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದು, ಯಾರು ಕೂಡ ಬೆಂಗಳೂರು ಬಿಟ್ಟು ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಹೊಸದಾಗಿ 480  ಅಂಬುಲೆನ್ಸ್ ಖರೀದಿ ಮಾಡಲಾಗಿದ್ದು, ಚಿಕಿತ್ಸೆಗೆ ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಯಾರು ಕೂಡ ಭಯಗೊಂಡು ಬೆಂಗಳೂರು ತೊರೆಯಬೇಡಿ. ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದರು.

ಈ ಪಿಡುಗು ಜಗತ್ತಿನಲ್ಲಿ ಹರಡಿದೆ. ಇದರ ಜೊತೆಗೆ ಬದುಕಬೇಕಿದೆ. ಇದನ್ನೇ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬದುಕು ಸಾಗಿಸಬೇಕಿದೆ ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top