ಡಿವಿಜಿ ಸುದ್ದಿ, ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ ಅಕ್ಟೋಬರ್, ನವೆಂಬರ್ ನಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಇಳಿಕೆಯಾಗಬಹುದು. ಈ ಬಗ್ಗೆ ಆಶಾವಾದಿಗಳಾಗಿರೋಣ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಾಲಕಾಲಕ್ಕೆ ಕ್ರಮ ಕೈಗೊಳ್ಳುತ್ತಲೇ ಬಂದಿದೆ. ಆದರೆ ಲಾಕ್ಡೌನ್ ತೆರವು ಮಾಡಿದ ನಂತರ ಹೊರ ರಾಜ್ಯಗಳಿಂದ ಬಂದ ಜನರಿಂದ ಸೋಂಕು ಹೆಚ್ಚಾಗಲು ಕಾರಣವಾಯಿತು ಎಂದರು.
ಕೆಲವು ಕಡೆ ಲ್ಯಾಬ್ ಟೆಕ್ನೀಷಿಯನ್ಗಳು ಸೋಂಕಿಗೆ ತುತ್ತಾಗಿದ್ದರಿಂದ ಲ್ಯಾಬ್ಗಳನ್ನು ಸೀಲ್ ಮಾಡಲಾಗಿದೆ. ಇದರಿಂದ ಜಿಲ್ಲಾ ಮಟ್ಟದಲ್ಲಿ ಲ್ಯಾಬ್ಗಳ ಸಂಖ್ಯೆಯನ್ನು ಜಾಸ್ತಿ ಮಾಡುತ್ತಿದ್ದೇವೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಸೋಂಕಿನ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.



