ಏ.30 ವರೆಗೆ ಉಚಿತ ಹಾಲು ವಿತರಣೆ ಮುಂದುವರಿಸಲು ತೀರ್ಮಾನ : ಯಡಿಯೂರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಿರಾಶ್ರಿತರು, ಬಡವರು,  ಕೂಲಿ ಕಾರ್ಮಿಕರ ಕುಟುಂಬಗಳಿಗೆ ಪ್ರತಿ ದಿನ ಒಂದು ಲೀಟರ್‌ ಹಾಲು ವಿತರಣೆಯನ್ನು ಏ.30 ರವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇ 3 ರವರೆಗೆ ಲಾಕ್‌ಡೌನ್ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ವಿವಿಧ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ವಿಲೇವಾರಿ ಮಾಡುವುದು ಕಷ್ಟವಾಗಿರುವುದರಿಂದ ಉಚಿತ ಹಾಲಿನ ವಿಸ್ತರಣೆ ಮುಂದುವರಿಸಲಾಗುವುದು ಎಂದು ತಿಳಿಸಿದದರು.

ರಾಜ್ಯದಲ್ಲಿ 14 ಹಾಲು ಒಕ್ಕೂಟಗಳಿದ್ದು,  ಪ್ರತಿ ದಿನದ 7.75 ಲಕ್ಷ ಲೀಟರ್‌ ಹಾಲು ಅಧಿಕವಾಗಿ ಸಂಗ್ರಹವಾಗುತ್ತಿದೆ. ಈ ಹಾಲನ್ನು ಬಡವರು, ಕೂಲಿ ಕಾರ್ಮಿಕರಿಗೆ   ವಿತರಿಸಲಾಗುತ್ತಿದೆ.

ರಾಜ್ಯ ಸರ್ಕಾರವೇ ಪ್ರತಿ ದಿನ ಸರಾಸರಿ7.75 ಲಕ್ಷ ಲೀಟರ್‌ ಹಾಲನ್ನು 37 ರಂತೆ ಖರೀದಿಸಿ ವಿತರಿಸಲಿದೆ. ಇದಕ್ಕಾಗಿ 25.81 ಕೋಟಿ ಅನುದಾನ ಮೀಸಲಿಡಲಾಗಿದೆ. .

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *