Connect with us

Dvgsuddi Kannada | online news portal | Kannada news online

ಎಸ್ ಎಸ್‍ಎಲ್‍ಸಿ ಪರೀಕ್ಷಾ ಕೆಂದ್ರಗಳಿಗೆ ಡಿಸಿ ಭೇಟಿ

ದಾವಣಗೆರೆ

ಎಸ್ ಎಸ್‍ಎಲ್‍ಸಿ ಪರೀಕ್ಷಾ ಕೆಂದ್ರಗಳಿಗೆ ಡಿಸಿ ಭೇಟಿ

ಡಿವಿಜಿ ಸುದ್ದಿ, ದಾವಣಗೆರೆ: ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ  ನಗರದಲ್ಲಿನ ಪರೀಕ್ಷಾ ಕೆಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು.  ಯಾವುದೇ ಗೊಂದಲಕ್ಕೆ ಒಳಗಾಗದೇ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ ತಿಳಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯದೆಲ್ಲೆಡೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪ್ರಥಮ ಇಂಗ್ಲೀಷ್ ಪರೀಕ್ಷೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಟ್ಟು 93 ಪರೀಕ್ಷಾ ಕೇಂದ್ರಗಳಿವೆ. ಬೆಳಿಗ್ಗೆಯಿಂದ 5 ಕೇಂದ್ರಗಳಿಗೆ ಭೇಟಿ ನೀಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಹ ಸಾಮಾಜಿಕ ಅಂತರ ಕಾಪಾಡಿಕೊಂಡು ಗೊಂದಲ ಆಗದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಒಳಗೆ ಕಳುಹಿಸಿ ಕೂರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಗಿದೆ. ವಿದ್ಯಾರ್ಥಿಗಳು ತುಂಬಾ ವಿಶ್ವಾಸ ಹಾಗೂ ಧೈರ್ಯದಿಂದ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಹೇಳಿದರು.

ಕಂಟೈನ್‍ಮೆಂಟ್ ಜೋನ್‍ನಲ್ಲಿರುವ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅವರಿಗಾಗಿ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಎನ್-95 ಮಾಸ್ಕ್ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಆರಾಮದಾಯಕವಾಗಿ ಪರೀಕ್ಷೆ ಬರೆಯಲು ಆತ್ಮವಿಶ್ವಾಸ ತುಂಬಲಾಗಿದೆ ಎಂದರು.

ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಲು ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಕೂಲ್ ಮತ್ತು ಖಾಸಗಿಯ 70 ಬಸ್‍ಗಳು ಹಾಗೂ ಸರ್ಕಾರದ ಕೆಎಸ್‍ಆರ್‍ಟಿಸಿಯ 16 ಬಸ್‍ಗಳು ಸೇರಿ ಒಟ್ಟು 86 ಬಸ್‍ಗಳ ಸೌಲಭ್ಯವನ್ನು ವ್ಯವಸ್ಥಿತವಾಗಿ ಒದಗಿಸಲಾಗಿದೆ. ಜೊತೆಗೆ ಪರೀಕ್ಷೆ ಮುಗಿದ ನಂತರವೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಪರೀಕ್ಷಾ ಕೇಂದ್ರದದ ಸುತ್ತ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ. ಬಹಳಷ್ಟು ದೂರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಇದರಿಂದಾಗಿ ಯಾವುದೇ ಪಾಲಕರು ಹಾಗೂ ಬೇರೆ ಯಾರೂ ಸಹ ಒಳಗೆ ಬರುವ ಮತ್ತು ಹೋಗುವಂತಹ ಗೊಂದಲ ಆಗಿಲ್ಲ. ಶಿಕ್ಷಣ ಸಚಿವರ ಆಶಯದಂತೆ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಬಹಳ ಯಶಸ್ವಿಯಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top