Connect with us

Dvgsuddi Kannada | online news portal | Kannada news online

ಸೈಕಲ್ ಜಾಥಾದ ಮೂಲಕ  `ಅಫರಾದ ತಡೆ’ ಜಾಗೃತಿ

ದಾವಣಗೆರೆ

ಸೈಕಲ್ ಜಾಥಾದ ಮೂಲಕ  `ಅಫರಾದ ತಡೆ’ ಜಾಗೃತಿ

ಡಿವಿಜಿ ಸುದ್ದಿ, ದಾವಣಗೆರೆ: ರಸ್ತೆ ನಿಯಮ ಪಾಲನೆ, ಅಪರಾಧ ತಡೆ ಜಾಗೃತಿ ಬಗ್ಗೆಅರಿವು ಮೂಡಿಸುವ ಸೈಕಲ್ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಚಾಲನೆ ನೀಡಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ `ಅಪರಾಧ ತಡೆ’ ಮಾಸಾಚರಣೆ ಕಾರ್ಯಕ್ರಮದಲ್ಲಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಾಯಿತು.  ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಬೇಡಿ.., ರಸ್ತೆಯಲ್ಲಿ ಪಾದಚಾರಿಗಳಿಗೆ ಮೊದಲು ಆದ್ಯತೆಯನ್ನು ನೀಡಿ.. ಹೀಗೆ ವಿವಿಧ  ಘೋಷಣಾ ಫಲಕಗಳೊಂದಿಗೆ ನಗರದ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು ಸೈಕಲ್ ಜಾಥಾದಲ್ಲಿ ಭಾಗಿಯಾಗಿ ನಗರದ ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದರು.

ಜಾಥಕ್ಕೆ ಚಾಲನೆ ನಂತರ ಮಾತನಾಡಿದ  ಎಸ್.ಪಿ.ಹನುಮಂತರಾಯ, ಸಾರ್ವಜನಿಕರಲ್ಲಿ ಅಪರಾಧ ತಡೆ ಕುರಿತು ಹಾಗೂ ರಸ್ತೆ ಸುರಕ್ಷತೆ ಕುರಿತಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಈ ಮಾಸಾಚರಣೆಯ ಮುಖ್ಯ ಉದ್ದೇಶವಾಗಿದೆ. ಡಿಸೆಂಬರ್ ತಿಂಗಳು ಎಲ್ಲ ಪೊಲೀಸ್ ಠಾಣೆ, ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಅಪರಾಧ ತಡೆ ಕುರಿತಾಗಿ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.

ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅಪರಾಧ ತಡೆ ಕುರಿತಾದ ಜಾಗೃತಿ ಫಲಕಗಳೊಂದಿಗೆ ನಗರದ ಮುಖ್ಯ ಭಾಗಗಳಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ.   ಸಂಜೆ ಸೈಬರ್ ಅಪರಾಧಗಳ ಕುರಿತು ತಜ್ಞರಿಂದ ಮಾಹಿತಿ ಸಭೆಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಮಾಸಾಚರಣೆಯಿಂದ ಅರಿವು ಪಡೆದುಕೊಂಡು ಅಪರಾಧ ತಡೆಯುವಲ್ಲಿ ಸಹಕರಿಸಬೇಕೆಂದು ಕರೆ ನೀಡಿದರು.

ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾದ ಜಾಥಾ  ಓಲ್ಡ್ ಐಬಿ, ಬಿಎಸ್‍ಎನ್‍ಎಲ್ ಆಫೀಸ್, ಎಂ.ಜಿ.ಸರ್ಕಲ್, ಮಂಡಿಪೇಟೆ, ವಸಂತ ರಸ್ತೆ, ಅರಣಾ ಸರ್ಕಲ್, ಎವಿಕೆ ರಸ್ತೆ, ಕೆಇಬಿ ಸರ್ಕಲ್, ಭಗತ್ ಸಿಂಗ್ ನಗರ ಆಟೋ ಸ್ಟ್ಯಾಂಡ್ ಮೂಲಕ ಕೆಟಿಜೆ ನಗರ ಪೊಲೀಸ್ ಠಾಣೆವರೆಗೆ ಸಾಗಿತು.

ಕಾರ್ಯಕ್ರಮದಲ್ಲಿ ಎಎಸ್‍ಪಿ ರಾಜೀವ್, ನಗರ ಡಿವೈಎಸ್‍ಪಿ ನಾಗೇಶ್ ಐತಾಳ್, ಮಹಿಳಾ ಪೊಲೀಸ್ ಇನ್ಸ್‍ಪೆಕ್ಟರ್ ನಾಗಮ್ಮ, ಇನ್ಸ್‍ಪೆಕ್ಟರ್‍ಗಳಾದ ಗಜೇಂದ್ರಪ್ಪ, ಸತೀಶ್ ಕುಮಾರ್, ಕೆಟಿಜೆ ನಗರ ಪಿಎಸ್‍ಐ ವೀರೇಶ್, ಟ್ರಾಫಿಕ್ ಪಿಎಸ್‍ಐ ಮಂಜುನಾಥ ಲಿಂಗಾರೆಡ್ಡಿ, ಸೇರಿದಂತೆ ಪೊಲೀಸ್ ಇಲಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top