Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

davangere abdul jabar 2
ಅಬ್ದುಲ್‌ ಜಬ್ಬಾರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ..?; ಶಾಮನೂರು ಕುಟುಂಬ‌ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ ; ಸಚಿವ ಮಲ್ಲಿಕಾರ್ಜುನ
astrology today 1
ಭಾನುವಾರದ ರಾಶಿ ಭವಿಷ್ಯ 12 ಏಪ್ರಿಲ್ 2026
davangere abdul jabar
ದಾವಣಗೆರೆ ಉಪಚುನಾವಣೆ; ಮುಸ್ಲಿಂ ಮುಖಂಡರಲ್ಲಿ ಅಸಮಾಧಾನ ಸ್ಫೋಟ; ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ‌ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ
davangere by election 5
ದಾವಣಗೆರೆ: ಸಮರ್ಥ್ ಶಾಮನೂರು ಸೋಲಿಸಲು ಪಕ್ಷದ ಹಿರಿಯರಿಂದ ದೊಡ್ಡ ಷಡ್ಯಂತ್ರ; ಸಲೀಂ ಅಹ್ಮದ್ ಆರೋಪ
astrology today 1
ಶನಿವಾರದ ರಾಶಿ ಭವಿಷ್ಯ 11 ಏಪ್ರಿಲ್ 2026

Socials

ದಾವಣಗೆರೆ

ಹಣ, ಅಧಿಕಾರಕ್ಕಿಂತ ಜ್ಞಾನ ಮುಖ್ಯ : ಮಹಾಂತೇಶ ಬೀಳಗಿ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: November 29, 2019
Share
3 Min Read
SHARE

ಡಿವಿಜಿ, ಸುದ್ದಿ, ದಾವಣಗೆರೆ: ಹಣ, ಅಧಿಕಾರಕ್ಕಿಂತ ಜ್ಞಾನ ಮುಖ್ಯ. ಜ್ಞಾನದ ಬೆನ್ನು ಹತ್ತಿದರೆ ಎಲ್ಲವನ್ನೂ ಪಡೆಯಬಹುದು. ಯಶಸ್ಸಿನ ಉನ್ನತಿಯನ್ನು ತಲುಪಲು ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಶುಕ್ರವಾರ ಆರಂಭಿಸಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

dv vv 2

ಜ್ಞಾನವೆಂದರೆ ಪರೀಕ್ಷೆಗಾಗಿ ಓದುವ ಅಭ್ಯಾಸವಲ್ಲ. ಬದುಕನ್ನು ರೂಪಿಸುವ ಅನುಭವ, ಅರಿವು. ಈ ಜ್ಞಾನಕ್ಕೆ ಮಿಗಿಲಾದುದು ಯಾವುದೂ ಇಲ್ಲ. ಜ್ಞಾನ ಒಂದಿದ್ದರೆ ಜಗತ್ತಿನಲ್ಲಿ ಏನೆಲ್ಲವನ್ನೂ ಸಾಧನೆ ಮಾಡಬಹುದು. ಈ ಸಾಧನೆಗೆ ಛಲ, ಪರಿಶ್ರಮ, ನಿರ್ದಿಷ್ಟ ಗುರಿ ಅನಿವಾರ್ಯ ಎಂದು ನುಡಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಪುಸ್ತಕ ಜ್ಞಾನದ ಜೊತೆಗೆ ಸಾಮಾನ್ಯ ಜ್ಞಾನವೂ ಅನಿವಾರ್ಯ. ಓದಿದ್ದನ್ನು ಅರ್ಥ ಮಾಡಿಕೊಂಡು ಬರೆಯುವ ಕೌಶಲ್ಯ ರೂಢಿಸಿಕೊಳ್ಳಬೇಕು. ಯಾವುದೇ ವಿಚಾರವನ್ನು ಸರಳವಾಗಿ, ಸ್ಪಷ್ಟವಾಗಿ ವಿವರಿಸುವ, ವಿಶ್ಲೇಷಿಸುವ ಸಾಮಥ್ರ್ಯವನ್ನು ಬೆಳೆಸಿಕೊಳ್ಳಬೇಕು. ಬರವಣಿಗೆ ಕೌಶಲ್ಯ ಕರಗತ ಮಾಡಿಕೊಂಡರೆ ಯಾವುದೇ ಪರೀಕ್ಷೆಯನ್ನೂ ಎದುರಿಸುವ ಆತ್ಮವಿಶ್ವಾಸ ಮೂಡುತ್ತದೆ ಎಂದು ಹೇಳಿದರು.

Related News

davangere abdul jabar 2
ಅಬ್ದುಲ್‌ ಜಬ್ಬಾರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ..?; ಶಾಮನೂರು ಕುಟುಂಬ‌ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ ; ಸಚಿವ ಮಲ್ಲಿಕಾರ್ಜುನ
April 12, 2026
astrology today 1
ಭಾನುವಾರದ ರಾಶಿ ಭವಿಷ್ಯ 12 ಏಪ್ರಿಲ್ 2026
April 11, 2026
davangere abdul jabar
ದಾವಣಗೆರೆ ಉಪಚುನಾವಣೆ; ಮುಸ್ಲಿಂ ಮುಖಂಡರಲ್ಲಿ ಅಸಮಾಧಾನ ಸ್ಫೋಟ; ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ‌ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ
April 11, 2026

ಸ್ಪರ್ಧಾತ್ಮಕ ಪರೀಕ್ಷೆ ಹೆಸರಿನಲ್ಲಿ ನಾಯಿ ಕೊಡೆಯಂತೆ ಹುಟ್ಟಿಕೊಂಡಿರುವ ತರಬೇತಿ ಕೇಂದ್ರಗಳು ವ್ಯವಹಾರದ ಕೇಂದ್ರಗಳಾಗಿವೆ. ಅವುಗಳ ಮೂಲಕ ವಿದ್ಯಾರ್ಥಿಗಳ ಸುಲಿಗೆ ನಡೆಯುತ್ತಿದೆ.ಇದನ್ನು ತಪ್ಪಿಸಿ ಬಡವರು, ದುರ್ಬಲರಿಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಹುದ್ದೆ ಲಭಿಸಬೇಕು ಎಂಬ ಉದ್ದೇಶದಿಂದದಾವಣಗೆರೆ ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಯೋಜನಾಬದ್ಧ ಅಧ್ಯಯನ ಅನಿವಾರ್ಯ. ನಿಗದಿತ ಕಾಲದಲ್ಲಿ ನಿರ್ದಿಷ್ಟ ಸಾಧನೆ ಮಾಡುವ ಗುರಿ ಇಟ್ಟುಕೊಳ್ಳಬೇಕು. ಯಾವುದೇ ಅಡ್ಡಿ, ಆತಂಕ, ನಿಂದನೆ ಎದುರಾದರೂ ಹಮ್ಮು, ಬಿಗುಮಾನ ಬಿಟ್ಟು ಕಲಿಯುವ ಆಸಕ್ತಿಯತ್ತ, ಗುರಿ ಸಾಧನೆಯತ್ತ ಗಮನ ಇರಬೇಕು. ಹಿರಿಯರ ಮಾರ್ಗದರ್ಶನವೂ ಅಗತ್ಯ. ಗೆಲ್ಲುª ತುಡಿತದಿಂದ ಅಧ್ಯಯನ ಮಾಡಬೇಕು. ಹಾಗಾದಾಗ ಮಾತ್ರ ಯಶಸ್ಸಿನ ಗುರಿ ತಲುಪಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

Related News

davangere by election 5
ದಾವಣಗೆರೆ: ಸಮರ್ಥ್ ಶಾಮನೂರು ಸೋಲಿಸಲು ಪಕ್ಷದ ಹಿರಿಯರಿಂದ ದೊಡ್ಡ ಷಡ್ಯಂತ್ರ; ಸಲೀಂ ಅಹ್ಮದ್ ಆರೋಪ
April 11, 2026
astrology today 1
ಶನಿವಾರದ ರಾಶಿ ಭವಿಷ್ಯ 11 ಏಪ್ರಿಲ್ 2026
April 10, 2026
arecanut rate today
ದಾವಣಗೆರೆ: ಸತತ ಕುಸಿತ ಬಳಿಕ ಭರ್ಜರಿ ಚೇತರಿಕೆ ಕಂಡ ಅಡಿಕೆ ರೇಟ್
April 10, 2026

ಸಾಧನೆಗೆ, ಸಿದ್ಧಿಗೆ ಬಡತನ ಎಂದಿಗೂ ಅಡ್ಡಿ ಬರುವುದಿಲ್ಲ. ಬಡತನವನ್ನೇ ಮೆಟ್ಟಿಲು ಮಾಡಿಕೊಳ್ಳಬೇಕು. ಯುಪಿಎಸ್‍ಸಿ, ಕೆಪಿಎಸ್‍ಸಿ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳು ಸಾಧನೆಯ ದೃಷ್ಟಿಯಿಂದ ನಿಜವಾದ ಪರೀಕ್ಷೆಗಳು. ಅವುಗಳಲ್ಲಿ ಯಶಸ್ಸು ಪಡೆಯುವುದು ಕಷ್ಟ ಸಾಧ್ಯವಾದರೂ, ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಪರೀಕ್ಷೆಗಳು ಹಾಗೆ, ಹೀಗೆ ಎನ್ನುವ ಕಟ್ಟು ಕತೆಗಳನ್ನು ಬಿಟ್ಟು ಶ್ರದ್ಧೆಯಿಂದ ಅಭ್ಯಾಸ ಮಾಡುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಅದಕ್ಕೆ ಪೂರಕವಾಗಿ ಸಾಧಕರಿಂದ ಸ್ಪೂರ್ತಿಯನ್ನೂ ಪಡೆಯಬೇಕು ಎಂದು ಸಲಹೆ ನೀಡಿದರು.

ಪರೀಕ್ಷಾ ಪೂರ್ವಸಿದ್ಧತೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಮನಸ್ಸು ಮತ್ತು ಹೃದಯವನ್ನು ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮೀಸಲಿಡಬೇಕು. ಹಲವು ವಿಭಿನ್ನ ಸ್ಪರ್ಧೆಗಳನ್ನು ಎದುರಿಸುವ ಬದಲಾಗಿ ಒಂದೇ ಉದ್ದೇಶಿತ ಗುರಿಯೊಂದಿಗೆ ಕೆಲಸ ಮಾಡುವ ನಿರ್ಧಾರ ಕೈಗೊಳ್ಳಬೇಕು. ಅಲ್ಲದೆ ಸಾಧಿಸುವ ಕಿಚ್ಚು ಮನಸ್ಸಿನಲ್ಲಿದ್ದರೆ ಯಶಸ್ಸು ನಿಶ್ಚಿತ ಎಂದು ತಿಳಿಸಿದರು.

dv vv 3

ಪರೀಕ್ಷೆಗೆ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷೆಗೆ ಅಗತ್ಯವಿರುವ ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನವೂ ಮುಖ್ಯ. ಪ್ರತಿದಿನವೂ ಅಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಪದವಿಯ ಸಾಧನೆಗಿಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳು ಮುಖ್ಯ. ಸಕಾಲಿಕ ತರಬೇತಿ, ಮಾರ್ಗದರ್ಶನದೊಂದಿಗೆ ಪರೀಕ್ಷೆ ಎದುರಿಸಲು ಸಜ್ಜಾಗಬೇಕು ಎಂದರು.

Related News

ration card
ಅನರ್ಹರರಿಗೆ ಶಾಕ್ ; 14 ಲಕ್ಷ‌ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಶಿಫ್ಟ್ ; ಆಹಾರ ಸಚಿವ ಮಾಹಿತಿ
April 10, 2026
dvg puc result
ದಾವಣಗೆರೆ: ಪಿಯುಸಿ ಫಲಿತಾಂಶ; ನವ್ಯಾ ಜಿನ್ನಪ್ಪಾ ಜಿಲ್ಲೆಗೆ ಪ್ರಥಮ
April 10, 2026
astrology today 1
ಶುಕ್ರವಾರದ ರಾಶಿ ಭವಿಷ್ಯ 10 ಏಪ್ರಿಲ್ 2026
April 9, 2026

ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿ. ಹಲಸೆ ಮಾತನಾಡಿ, ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನೀಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ರೀತಿಯಲ್ಲಿ ಮಾರ್ಗದರ್ಶನ ನೀಡಬೇಕು. ಅದಕ್ಕಾಗಿ ತರಬೇತಿ ಕೇಂದ್ರ ಆರಂಭಿಸಬೇಕು ಎಂಬ ಎರಡು ವರ್ಷಗಳ ಹಿಂದಿನ ಕನಸು ಇದೀಗ ನನಸಾಗಿದೆ. ಇಲ್ಲಿಯ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಶ್ವವಿದ್ಯಾನಿಲಯದ ಬೋಧಕ ಸಿಬ್ಬಂದಿ ಹಲವು ವಿಷಯಗಳಲ್ಲಿ ಪರಿಣತಿ ಪಡೆದಿದ್ದಾರೆ. ಅವರ ಮಾರ್ಗದರ್ಶನ, ತರಬೇತಿಯೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಮತ್ತು ಸ್ಪರ್ಧೆ ಎದುರಿಸಲು ಸಹಕಾರಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕುಲಸಚಿವ ಪ್ರೊ.ಬಸವರಾಜ ಬಣಕಾರ, ಜಿಲ್ಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತರಬೇತಿ ಕೇಂದ್ರ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಯಶಸ್ಸು ಸಾಧಿಸಿದರೆ ತಮ್ಮ ಪ್ರಯತ್ನ ಸಾರ್ಥಕವಾಗಲಿದೆ ಎಂದು ನುಡಿದರು.

ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್.ಎಸ್. ಅನಿತಾ, ಹಣಕಾಸು ಅಧಿಕಾರಿ ಪ್ರೊ.ಗೋಪಾಲ ಎಂ.ಅಡವಿರಾವ್, ಸಿಂಡಿಕೇಟ್ ಸದಸ್ಯರಾದ ಜಯಪ್ರಕಾಶ್ ಕೊಂಡಜ್ಜಿ, ಶಶಿಧರ್ ಬಿ.ಎನ್. ಪ್ರೊ.ಯು.ಎಸ್. ಮಹಾಬಳೇಶ್ವರ, ಡಾ.ಈಶ್ವರಪ್ಪ, ಡಾ.ರವಿ ಪಾಟೀಲ, ಡಾ. ಪ್ರಸನ್ನಕುಮಾರ್, ಡಾ.ಶಿವಕುಮಾರ ಕಣಸೋಗಿ, ಸಾಹಿತಿ ಪ್ರೊ.ರಾಘವೇಂದ್ರ ಪಾಟೀಲ ಉಪಸ್ಥಿತರಿದ್ದರು.

TAGGED:#newscamps competativedavagere vvfeatured
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಆರ್ .ರಾಘವೇಂದ್ರಗೆ ಪಿಎಚ್ ಡಿ ಪದವಿ
Next Article ಶನಿವಾರದ ರಾಶಿ ಭವಿಷ್ಯ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

puc resutl

ಪಿಯುಸಿ ಫಲಿತಾಂಶ; ಶೇ.86.48 ರಷ್ಟು ತೇರ್ಗಡೆ; ವಾಣಿಜ್ಯ ವಿಭಾಗದಲ್ಲಿ ಅದಿತಿ, ವಿದಿಶಾ 600ಕ್ಕೆ 600 ಅಂಕ

ಪಿಯುಸಿ ಫಲಿತಾಂಶ ಪ್ರಕಟ; ಈ ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಿ

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!