ಡಿವಿಜಿಸುದ್ದಿ.ಕಾಂ, ದಾವಣಗೆರೆ: ನಗರದ ಎಂಸಿಸಿ’ಬಿ’ ಬ್ಲಾಕ್ ನಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. 50 ವರ್ಷದ ಬಾಲಣ್ಣ ಮೃತ ವ್ಯಕ್ತಿಯಾಗಿದ್ದಾರೆ.
ಮಗ ರಾತ್ರಿ ಊಟಕ್ಕೆ ಹೊರಗಡೆ ಹೋಗಿದ್ದ ಈ ಘಟನೆ ನಡೆದಿದೆ. ದಲ್ಲಾಳಿಯಾಗಿದ್ದ ಬಾಲಣ್ಣ ಮನೆಯಲ್ಲಿ ಒಬ್ಬನೇ ಇದ್ದಾಗ ಈ ಘಟನೆ ನಡೆಸಿದೆ. ರಾತ್ರಿ 1 ಗಂಟೆಗೆ ಬಂದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂಬುದು ಶಂಕೆ ವ್ಯಕ್ತವಾಗಿದೆ. ತಡ ರಾತ್ರಿ ಸ್ಥಳಕ್ಕೆ ಎಸ್ ಪಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಲಾಗಿದೆ.



