Connect with us

Dvgsuddi Kannada | online news portal | Kannada news online

ಹರಿಹರ : ಹೊರ ರಾಜ್ಯದಿಂದ ಬಂದವರನ್ನು ಕ್ವಾರೆಂಟೆನ್ ಗೆ ಗುತ್ತೂರು ಗ್ರಾಮಸ್ಥರಿಂದ ಪ್ರತಿಭಟನೆ; ಕೊಂಡಜ್ಜಿ ಕಡೆ ಹೊರಟ ಅಧಿಕಾರಿಗಳು

ಪ್ರಮುಖ ಸುದ್ದಿ

ಹರಿಹರ : ಹೊರ ರಾಜ್ಯದಿಂದ ಬಂದವರನ್ನು ಕ್ವಾರೆಂಟೆನ್ ಗೆ ಗುತ್ತೂರು ಗ್ರಾಮಸ್ಥರಿಂದ ಪ್ರತಿಭಟನೆ; ಕೊಂಡಜ್ಜಿ ಕಡೆ ಹೊರಟ ಅಧಿಕಾರಿಗಳು

ಡಿವಿಜಿ ಸುದ್ದಿ, ಹರಿಹರ : ರಾಜಸ್ತಾನ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ಕಡೆಯಿಂದ ಬಂದಿದ್ದ ಏಳು ಜನರನ್ನು ಗುತ್ತೂರು ಗ್ರಾಮದ ಅಲ್ಪಸಂಖ್ಯಾತ ಹಾಸ್ಟೆಲ್ ನಲ್ಲಿ ಕ್ವಾರೈಂಟೆನ್ ಮಾಡಲು ಮುಂದಾದ ಸಂದರ್ಭದಲ್ಲಿ ಗ್ರಾಮಸ್ಥರು ತೀವ್ರವಾಗಿ ವಿರೋಧಿಸಿ ಪ್ರತಿಭಟನೆ ನಡೆಸಿದರು.

ತಾಲೂಕಿನ ಗುತ್ತೂರಿನ ವಿದ್ಯಾರ್ಥಿಗಳ ವಸತಿ ಗೃಹದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಆದೇಶದ ಮೇರೆಗೆ ದಾವಣಗೆರೆಯಲ್ಲಿದ್ದ ಸೋಂಕಿತರನ್ನು ಕ್ವರೆಂಟ್ ನಲ್ಲಿ ಇರಿಸಲು ಹರಿಹರ ತಹಶೀಲ್ದಾರ್ ಕೆ.ಬಿ ರಾಮಚಂದ್ರಪ್ಪ ಮುಂದಾದಾಗ ಗುತ್ತೂರು ಗ್ರಾಮದ ಜನರು ಕಾರ್ಯಕ್ಕೆ ಅಡ್ಡಿಪಡಿಸಿ, ಇಲ್ಲಿ ಸೋಂಕಿತರನ್ನು ಇರಿಸುವುದು ಬೇಡ. ಬೇರೆ ಕಡೆ ಇರಿಸಿ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಮಾಜಿ ಶಾಸಕ ಬಿ.ಪಿ ಹರೀಶ್ ಭೇಟಿ ನೀಡಿ, ತಾಲೂಕಿನಲ್ಲಿ ಇದುವರೆಗೂ
ಯಾವುದೇ ಕೊರೋನಾ ಸೋಂಕು ಕಾಣಿಸಿಕೊಂಡಿಲ್ಲ. ಇಲ್ಲಿನ ಜನರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ತಹಶೀಲ್ದಾರ್ ಅವರ ನಿರ್ಧಾರದಿಂದ ಇಲ್ಲಿನ ಜನರ ನೆಮ್ಮದಿ ಕೆಡಿಸುವುದು ಬೇಡ. ಸೋಂಕಿತರನ್ನು ಇಲ್ಲಿ ಹಿರಿಸುವುದು ಬೇಡ. ಇರಿಸಲು ನಾನು ಬಿಡುವುದಿಲ್ಲ ಎಂದು ಜನರಲ್ಲಿ ಧೈರ್ಯ ತುಂಬಿದರು.ನಂತರ ಸ್ಥಳಕ್ಕೆ ಎಸ್ ರಾಮಪ್ಪ ಬೇಟಿನೀಡಿ ಅಧಿಕಾರಿಗಳ ತಂಡವನ್ನು ಕೊಂಡಜ್ಜಿ ಗ್ರಾಮಕ್ಕೆ ತೆರಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top