ಡಿವಿಜಿ ಸುದ್ದಿ, ದಾವಣಗೆರೆ : ಕೊರೊನ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರಾದ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.
ಶ್ವಾಸಕೋಶಶಾಸ್ತ್ರಜ್ಞರು(ಪಲ್ಮನಾಲಜಿಸ್ಟ್), ಸಾಮಾನ್ಯ ಔಷಧ(ಜನರಲ್ ಮೆಡಿಸಿನ್) ತುರ್ತು ಔಷಧ(ಎಮೆರ್ಜೆನ್ಸಿ ಮೆಡಿಸಿನ್) ಅರಿವಳಿಕೆ(ಅನಸ್ತೇಷಿಯಾ) ತಲಾ ಎರಡರಂತೆ ಒಟ್ಟು 08 ಹುದ್ದೆಗಳನ್ನು 6 ತಿಂಗಳ ಮಟ್ಟಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದ್ದು ಆಸಕ್ತ ಅಭ್ಯರ್ಥಿಗಳಿಗೆ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.
ಆಸಕ್ತ ಅಭ್ಯರ್ಥಿಗಳಿಗೆ ಆ.14 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ನೇರ ಸಂದರ್ಶನ (ವಾಕ್ ಇನ್ ಇಂಟರ್ವ್ಯೂ) ಏರ್ಪಡಿಸಲಾಗಿದೆ. ತಜ್ಞ ಹುದ್ದೆಗಳು ಲಭ್ಯವಿಲ್ಲದೇ ಇದ್ದಲ್ಲಿ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿಗಳನ್ನು(ಎಂಬಿಬಿಎಸ್ ಪದವಿ) ನೇಮಕಾತಿ ಮಾಡಿಕೊಳ್ಳಲಾಗುವುದು.
ಅಭ್ಯರ್ಥಿಗಳು ಆ.13 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕೆಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



