ಡಿವಿಜಿ ಸುದ್ದಿ, ಚನ್ನಗಿರಿ: ಕೊರೊನಾ ವೈರಸ್ ಹಿನ್ನೆಲೆ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದು, ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಜಿಲ್ಲಾ ಉಸ್ತು ವಾರಿ ಸಚಿವ ಭೈರತಿ ಬಸವರಾಜ್ ಅವರು ಆಹಾರ ಕಿಟ್ ವಿತರಿಸಿದರು.

ಚನ್ನಗಿರಿ ಪಟ್ಟಣದ ಜವಳಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕೋವಿಡ್ -19 ವೈರಾಣು ನಿಯಂತ್ರಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಂತರ ಬಡವರಿಗೆ ಆಹಾರ ಕಿಟ್ ವಿತರಿಸಲಾಯಿತು. ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಡ ಕುಟುಂಬ ಗಳಿಗೆ ಮಾಸ್ಕ್ ಜೊತೆ ಆಹಾರ ಕಿಟ್ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್, ಶಾಸಕ ಮಾಡಾಳ್ ವಿರುಪಾಕ್ಷಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಯಶೋಧಮ್ಮ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



