Connect with us

Dvgsuddi Kannada | online news portal | Kannada news online

ವಸತಿ ಅರ್ಜಿ ಸ್ವೀಕರಿಸುತ್ತಿಲ್ಲ : ಆಯುಕ್ತ ಮಂಜುನಾಥ್ ಬಳ್ಳಾರಿ

ದಾವಣಗೆರೆ

ವಸತಿ ಅರ್ಜಿ ಸ್ವೀಕರಿಸುತ್ತಿಲ್ಲ : ಆಯುಕ್ತ ಮಂಜುನಾಥ್ ಬಳ್ಳಾರಿ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ನಿವೇಶನ ರಹಿತರಿಗೆ, ನಿವೇಶನ ನೀಡುವುದರ ಕುರಿತು ಯಾವುದೇ ನಿಗಧಿತ ಅರ್ಜಿಗಳನ್ನು ವಿತರಿಸುತ್ತಿಲ್ಲ ಹಾಗೂ ಸ್ವೀಕರಿಸುತ್ತಿಲ್ಲ. ನಿವೇಶನ ರಹಿತರು ಅರ್ಜಿಯನ್ನು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಜ್ ಯೋಜನೆ ಮೂಲಕ ಆನ್‍ಲೈನ್ ತಂತ್ರಾಂಶದಲ್ಲಿ  ಅರ್ಜಿ  ಸಲ್ಲಿಸಬಹುದಾಗಿದೆ.

ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‍ಗಳಲ್ಲಿ ಆಶ್ರಯ ಯೋಜನೆಯ ಅರ್ಜಿ ನೀಡುತ್ತಿರುವ ಕುರಿತು ದೂರುಗಳು ಬಂದಿದ್ದು, ಸಾರ್ವಜನಿಕರು ಇದಕ್ಕೆ ಕಿವಿಗೊಡಬಾರದು ಮತ್ತು ಅಂತಹ ಯಾವುದೇ ಮಾಹಿತಿ ಇದ್ದರೆ ಪಾಲಿಕೆಗೆ ನೀಡಬಹುದು ಎಂದರು.

ಆಶ್ರಯ ಸಮಿತಿಯಲ್ಲಿ ಮನೆ, ನಿವೇಶನ ಮಂಜೂರಿಗೆ ಪರಿಗಣಿಸುವಾಗ ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದೆಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top