ಡಿವಿಜಿ ಸುದ್ದಿ, ದಾವಣಗೆರೆ: ನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ಶಿವರಾತ್ರಿ ಹಿನ್ನೆಲೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಲಿಂಗು ಮತ್ತು ನಂದಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜಾ ಕೈಂಕಾರ್ಯ ನೆರವೇರಿಸಲಾಯಿತು.
ಶಿವಸ್ತುತಿ, ಶಿವನ ಆರಾಧನೆ ನಂತರ ರುದ್ರಾಭಿಷೇಕ ನಡೆಯಿತು. ಈ ಮೂಲಕ ಮಕ್ಕಳಲ್ಲಿ ಆಧ್ಯಾತ್ಮಿಕ ಚಿಂತನೆ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ವಿದ್ಯಾರ್ಥಿಗಳಿಗೆ ಶಿವರಾತ್ರಿಯ ಮಹತ್ವನ್ನು ತಿಳಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಬಿ. ಸಂಗಮೇಶ್ವರ ಗೌಡ ಸೇರಿದಂತೆ ಎಲ್ಲಾ ಮಕ್ಕಳು, ಶಾಲಾ ಸಿಬ್ಬಂದಿ ಭಾಗಿಯಾಗಿದ್ದರು.




