ಡಿವಿಜಿ ಸುದ್ದಿ, ದಾವಣಗೆರೆ: ಡ್ರಗ್ಸ್ ಮಾಫಿಯಾ ಹಣದಿಂದಲೇ ಸಮ್ಮಿಶ್ರ ಸರ್ಕಾರ ಬೀಳಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯ ಹೇಳಿದ್ದಾರೆ. ಹೀಗಾಗಿ ಇಂದ್ರಜಿತ್ ಲಂಕೇಶ್ ನಂತೆ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಿದ್ದರಾಮಯ್ಯ ಡ್ರಗ್ಸ್ ಸೇವಿಸುತ್ತಿದ್ದರು ಎನ್ನುವ ಆರೋಪವಿದೆ. ಸಿದ್ದರಾಮಯ್ಯನವರಿಗೆ ಯುವ ಸಮೂಹ ಮೇಲೆ ಕಾಳಜಿ ಇದ್ದಿದ್ದರೆ, ಈ ರೀತಿ ಮಾಡುವುದಕ್ಕೆ ಬಿಡುತ್ತಿರಲಿಲ್ಲ. ಡ್ರಗ್ಸ್ ಇದೊಂದು ಜಿಹಾದ್ ಎಂದೇ ಹೇಳಬಹುದು. ಮುಸ್ಲಿಂಮರಿಂದ ಬಹು ದೊಡ್ಡ ಕಾರ್ಯ ದಂಧೆ ನಡೆಯುತ್ತದೆ.
ಯುವ ಜನತೆಯನ್ನು ದುರ್ಬಲ ಮಾಡಬೇಕು ಎನ್ನುವುದು ಅವರ ಉದ್ದೇಶ. ಪೊಲೀಸರಿಗೆ ಹಾಗೂ ಡ್ರಗ್ಸ್ ಮಾಫಿಯಾದವರಿಗೆ ಲಿಂಕ್ ಇದೆ. ಎಲ್ಲೆಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ. ಆದರೆ ರಾಜಕೀಯ ಶಕ್ತಿಗಳು ಇವರ ಕೈ ಕಟ್ಟಿಹಾಕುತ್ತಿದ್ದಾರೆ ಎಂದು ರಾಜಕಾರಣಿಗಳ ವಿರುದ್ಧ ಕಿಡಿಕಾರಿದರು.
ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಕಲೆಹಾಕುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಬೇಹುಗಾರಿಕೆ ವಿಫಲವಾಗಿದೆ. ಇದನ್ನು ತಡೆಯಲು ಎಲ್ಲಾ ಪಕ್ಷದವರು ವಿಫಲವಾಗಿದ್ದಾರೆ. 2009 ರಲ್ಲಿ ಪಬ್ ಗಲಾಟೆಯಾದಾಗ ಇದನ್ನು ತಡೆಗಟ್ಟಬಹುದಿತ್ತು. ನಾನು ಆಗಲೇ ಹೇಳಿದ್ದೆ ಪಬ್ ಗಳಲ್ಲಿ ಡ್ರಗ್ಸ್ ನಡೆಯುತ್ತದೆ ಎಂದು. ಆದರೆ ನನ್ನನ್ನು ಜೈಲಿಗೆ ಹಾಕಿದ್ರು. ಹ್ಯಾರಿಸ್ ಮಗ ನೆಲಪಾಡ್ ಗಲಾಟೆಯಾಯ್ತು. ಆಗ ಶೋಭಾ ಕರಂದ್ಲಾಜೆ ಹೇಳಿದ್ರು ಡ್ರಗ್ಸ್ ವಿಚಾರದಲ್ಲಿ ಗಲಾಟೆಯಾಗಿದೆ ಎಂದಿದ್ದರು. ಈಗ ನಿಮ್ಮದೇ ಸರ್ಕಾರವಿದೆ ಏನು ಕ್ರಮಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.



