ಖಾಸಗೀಕರಣ ನೀತಿಗೆ ಖಂಡಿಸಿ ಸಿಪಿಐ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ದೇಶದಲ್ಲಿ ದಿನಕಳೆದಂತೆ ಆರ್ಥಿಕ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನ ಜೀವನ  ಕಷ್ಟಕರವಾಗುತ್ತಿದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಸಿಪಿಐ ಹಾಗೂ ಸಿಪಿಐಎಂ  ಪಕ್ಷದಿಂದ  ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ದೇಶದ ಅರ್ಥವ್ಯವಸ್ಥೆಯೂ ಹಿಂಜರಿತ ಅಂಚಿಗೆ ಬಂದಿರುವುದು ಅತ್ಯಂತ ಗಂಭೀರವಾದ ಸಮಸ್ಯೆ. ನಿರುದ್ಯೋಗ  ಪ್ರಮಾಣ ಹೆಚ್ಚಾಗುತ್ತಿದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಜನ ಜೀವನ ತತ್ತರಿಸಿ ಹೋಗಿದೆ.

ಸಾರ್ವಜನಿಕ ರಂಗದ ರೈಲ್ವೆ, ಬಿಎಸ್‌ಎನ್‌ಎಲ್, ಕಲ್ಲಿದ್ದಲು, ರಕ್ಷಣಾ ಕೈಗಾರಿಕೆ, ಬ್ಯಾಂಕ್ ಮತ್ತು ವಿಮಾ ರಂಗಗಳಲ್ಲಿ ಖಾಸಗೀಕರಣ ನೀತಿಗಳಿಂದ ಮತ್ತು ಆರ್ಥಿಕ ಹಿಂಜರಿತಗಳಿಂದ ಕಾರ್ಮಿಕರು ಮತ್ತು ನೌಕರರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಖಾಸಗಿ ರಂಗದ ಶೋಷಣಾ ವ್ಯವಸ್ಥೆ ಹೆಚ್ಚಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಕೇಂದ್ರ ಸರ್ಕಾರ ಆರ್ಥಿಕ ಸಮಸ್ಯೆ ಬಗೆಹರಿಸಬೇಕೆಂದು  ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಯಲು ಸಾಲಮನ್ನಾ ಮಾಡಬೇಕು. ವೃದ್ದರಿಗೆ, ವಿಧವೆಯರಿಗೆ ಮಾಸಿಕ ಪಿಂಚಣಿ ಮೊತ್ತ 3 ಸಾವಿಕ್ಕೆ ಏರಿಸಬೇಕು. ಖಾಸಗೀಕರಣ ನೀತಿ ಕೈಬಿಟ್ಟು ಜನಪರ ಆರ್ಥಿಕ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹೆಚ್.ಕೆ.ರಾಮಚಂದ್ರಪ್ಪ,ಟಿ.ವಿ.ರೇಣುಕಮ್ಮ, ಹೆಚ್.ಜಿ.ಉಮೇಶ್,ಕೆ.ಎಲ್.ಭಟ್, ಆವರಗೆರೆ ವಾಸು, ಆನಂದರಾಜ್, ಆವರಗೆರೆ ಚಂದ್ರು, ಬಸವರಾಜ್, ಸುರೇಶ್ ಸೇರಿದಂತೆ ಅನೇಕರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *