ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಮಾ.24 ರಿಂದ ಏಪ್ರಿಲ್ 01 ರವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ಯಾರು ಕೂಡ ಮನೆಯಿಂದ ಹೊರ ಬರದಂತೆ ನಿಷೇಧ ಹೇರಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ವೈರಸ್ ತಪಾಸಣಾ ಸಿಬ್ಬಂದಿ ಹೊರತುಪಡಿಸಿ, 5 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಧಾರ್ಮಿಕ ಪ್ರಾರ್ಥನೆ, ಹಬ್ಬದ ಸಂದರ್ಭದಲ್ಲಿಯೂ ಗುಂಪು ಸೇರುವುದನ್ನು ನಿಷೇಧಿಸಿದೆ. ಸಿಆರ್ಪಿಸಿ 1973 ರ ಕಲಂ 144 ರನ್ವಯ ಮಾ.24 ರಿಂದ ಏಪ್ರಿಲ್ 01 ಜಿಲ್ಲೆಯಾದ್ಯಂತ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದೆ.



