ದಾವಣಗೆರೆ ನಗರದ ಆಟೋದಲ್ಲಿ 39 ಲಕ್ಷ ಕಳೆದುಕೊಂಡ ವೃದ್ಧ ದಂಪತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ : ಬ್ಯಾಂಕಿಗೆ ಹಣ ಕಟ್ಟಲು ಬಂದು, ಆಟೋದಲ್ಲಿ ಬ್ಯಾಗ್ ಬಿಟ್ಟು ಹೋದ ಪರಿಣಾಮ 39 ಲಕ್ಷ ರೂಪಾಯಿಗಳನ್ನು ವೃದ್ಧ ದಂಪತಿಗಳಯ ಕಳೆದುಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮಾಣಿಕ್ಯಾ ವಾಸಗರ್(70) ತಿಲಕವತಿ(68) ಹಣ ಕಳೆದುಕೊಂಡ ದಂಪತಿಗಳು. ದಾವಣಗೆರೆ ನಗರದ ಕೆಆರ್ ಮಾರ್ಕೆಟ್ ಬಳಿಯ ವೈಶ್ಯಾ ಬ್ಯಾಂಕ್ ಬಳಿ ಘಟನೆ ನಡೆದಿದ್ದು, ಬ್ಯಾಂಕಿಗೆ ದುಡ್ಡು ಕಟ್ಟಲು ಹೋಗಿದ್ದ ದಂಪತಿಗಳು ಹೋಗಿದ್ದರು.ಬ್ಯಾಂಕ್ ಬಳಿ ಆಟೋದಿಂದ ಇಳಿಯುವಾಗ ಹಣವನ್ನು ಆಟೋದಲ್ಲಿಯೇ ಬಿಟ್ಟು ಬ್ಯಾಂಕಿನ ಒಳಗೆ ಹೋಗಿದ್ದಾರೆ.ವಾಪಸ್ಸು ಬಂದು ನೋಡುವಷ್ಟರಲ್ಲಿ ಆಟೋ ನಾಪತ್ತೆಯಾಗಿದೆ.

ಜಮೀನು ಮಾರಾಟ ಮಾಡಿದ ಹಣ ಬ್ಯಾಂಕಿಗೆ ತುಂಬಲು ಬಂದಿದ್ದ ದಂಪತಿಗಳು.ದಾವಣಗೆರೆ ನಗರದ ಬೇತೂರ ರಸ್ತೆಯ ಮನೆಯಿಂದ ಕೆಆರ್ ಮಾರ್ಕೆಟ್ ಬ್ಯಾಂಕಿಗೆ ಆಟೋದಲ್ಲಿ ಬಂದಿದ್ದರು.ದಾವಣಗೆರೆ ನಗರದ ಬಸವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಡಿವಿಜಿ ಸುದ್ದಿ, ವಾಟ್ಸ್ ಆಪ್ : 7483892205

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *