ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೊಡಗನೂರು ವಿಜಯಕುಮಾರ್ ಅವರಿಗೆ ಮನೆ ನಿರ್ಮಿಸಲು ಕೈಜೋಡಿಸಿ: ಜಿಲ್ಲಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಹಾಗೂ ದಾವಣಗೆರೆ ಹೆಮ್ಮೆಯ ಕಲಾವಿದ ಕೊಡಗನೂರು ಜಯಕುಮಾರ್  ಅವರು ಸದ್ಯ ಸಂಕಷ್ಟದ ಸ್ಥಿತಿಯಲ್ಲಿದ್ದು, ಅವರಿಗೆ ಸೂರು ನಿರ್ಮಿಸಿಕೊಡಲು ಎಲ್ಲಾ ಅಧಿಕಾರಿಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಜನಸ್ಪಂದನ ಸಭೆಗೆ ಆಗಮಿಸಿದ ಹಿರಿಯ ಕಲಾವಿದ ಕೊಡಗನೂರು ವಿಜಯಕುಮಾರ್ , ದಾವಣಗೆರೆಯಲ್ಲಿ ಒಂದು ಸೂರಿನ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದರು. ಅನಾರೋಗ್ಯದಿಂದ ಬಳಲುತ್ತಿರುವ ಇವರು ತಮ್ಮ ಮಗನ ಸಹಾಯದಿಂದ ಸಭೆಗೆ ಹಾಜರಾಗಿದ್ದರು.

kodangnuru vijayakumar dvgsuddi

ಜಿಲ್ಲಾಧಿಕಾರಿ, ಸಿಇಓ ಇತರರು ಸೇರಿದಂತೆ ಅಧಿಕಾರಿಗಳು ಎದ್ದು ನಿಂತು ಕೈಮುಗಿದು ಅರ್ಜಿ ಸ್ವೀಕರಿಸಿದರು. ನೀವು ವೈಯಕ್ತಿಕವಾಗಿಯೇ ಬಂದು ಅರ್ಜಿ ನೀಡಬಹುದಿತ್ತು. ನೀವು ಇಲ್ಲಿ ಅರ್ಜಿ ಸಲ್ಲಿಸಿ, ಜನಸ್ಪಂದನದ ಗೌರವ ಹೆಚ್ಚಿಸಿದ್ದೀರಿ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಮತ್ತು ಗೌರವ ಇದೆ. ಮನೆ ಒದಗಿಸಿಕೊಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜನಸ್ಪಂದನ ಸಭೆ ಬಳಿಕ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ  ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ  ಅವರು, ಕೊಡಗನೂರು ವಿಜಯ ಕುಮಾರ್ ಅವರ  ಸದ್ಯದ ಪರಿಸ್ಥಿತಿ ಅಷ್ಟು ಸರಿಯಿಲ್ಲ. ಅನಾರೋಗ್ಯದಿಂದ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇವರಿಗೆ ಮನೆ ಅಥವಾ ನಿವೇಶನ ಇಲ್ಲ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಜನಸ್ಪಂದನ ಸಭೆಗೆ ಆಗಮಿಸಿ ಯಾವುದಾದರೂ ಯೋಜನೆಯಡಿ ಮನೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಇಂತಹ ವ್ಯಕ್ತಿಗೆ ನಾವೆಲ್ಲರೂ ಕೂಡಿ ಒಂದು ಸೂರಿನ ವ್ಯವಸ್ಥೆ ಮಾಡೋಣ ಎಂದರು.
ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಇದಕ್ಕೆ ಸಹಮತ ವ್ಯಕ್ತಪಡಿಸಿದಾಗ ಜಿಲ್ಲಾಧಿಕಾರಿಗಳು, ಎಷ್ಟು ದಿನಗಳ ಒಳಗೆ ಈ ವ್ಯವಸ್ಥೆ ಮಾಡಲಾಗುವುದು ಎನ್ನುವುದನ್ನೂ ಮುಂದೆ ಚರ್ಚಿಸೋಣ. ನಾವು ನಮ್ಮ ಕೆಲಸವನ್ನು ಕರ್ತವ್ಯವೆಂದು ಮಾಡಬಾರದು, ಬದಲಾಗಿ ಸಂತೋಷದಿಂದ ಈ ಕಾರ್ಯ ಮಾಡುತ್ತಿದ್ದೇನೆ ಅಂದುಕೊಳ್ಳಬೇಕು. ಈ ನಿಟ್ಟಿನಲ್ಲಿ ನಾವೆಲ್ಲ ನಮ್ಮ ಕೆಲಸವನ್ನು ಸಂತಸ, ಹುರುಪಿನಿಂದ ಮಾಡಿದಾಗ ಅದು ಸಾರ್ಥಕವಾಗುತ್ತದೆ ಎಂದರು.

ಸಭೆಯಲ್ಲಿ ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ಡಿಡಿಎಲ್‍ಆರ್ ರಾಮಾಂಜನೇಯ, ಕೆಎಸ್‍ಆರ್‍ಟಿಸಿ ಡಿಸಿ ಸಿದ್ದೇಶ್ವರ್, ಡಿಡಿಪಿಐ ಪರಮೇಶ್ವರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

 

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *