ಡಿವಿಜಿ ಸುದ್ದಿ, ದಾವಣಗೆರೆ: 2020-21 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಗ್ರಾಮೋದ್ಯಮ ಮತ್ತು ಸಣ್ಣ ಉದ್ಯಮಗಳ ಯೋಜನೆಯಡಿ ಜೇನು ಸಾಕಾಣೆ ತರಬೇತಿ ಆಸಕ್ತ ರತರಿಗೆ ತರಬೇತಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತ ಫಲಾನುಭವಿಗಳು ಈ ಕಚೇರಿ ವೇಳೆಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದ್ದು, ಹೆಸರನ್ನು ನೋಂದಾಯಿಸಿಕೊಳ್ಳಲು ಜುಲೈ 31 ಕಡೆಯ ದಿನವಾಗಿದೆ. ಮೊದಲು ಬಂದವರಿಗೆ ಆದ್ಯತೆ. ಹೆಚ್ಚಿನ ಮಾಹಿತಿಗಾಗಿ ಪವನ್ಕುಮಾರ್ ಹೆಚ್.ಎಸ್, ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಕಸಬಾ, ಮೊಬೈಲ್ ಸಂ: 7022244152. ರವಿ, ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಆನಗೋಡು, ಮೊಬೈಲ್ ಸಂ: 7019819101. ಏಕಾಂತ್, ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಮಾಯಕೊಂಡ-1. ಮೊಬೈಲ್: 7899445111, ಅರುಣ್ ರಾಜ್ ಪಿ.ಎಲ್. ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಮಾಯಕೊಂಡ-2, ಮೊಬೈಲ್: 8722551293 ಸಂಪರ್ಕಿಸಬಹುದು.



