Connect with us

Dvgsuddi Kannada | online news portal | Kannada news online

ಅಡಿಕೆ ಬೆಳೆ ಕಾಂಡ ಸೀಳುವಿಕೆ ತಡೆಗಟ್ಟುವ ಕ್ರಮ ಹೇಗೆ ಅನ್ನೋ ಮಾಹಿತಿ ಇಲ್ಲಿದೆ ನೋಡಿ..

ದಾವಣಗೆರೆ

ಅಡಿಕೆ ಬೆಳೆ ಕಾಂಡ ಸೀಳುವಿಕೆ ತಡೆಗಟ್ಟುವ ಕ್ರಮ ಹೇಗೆ ಅನ್ನೋ ಮಾಹಿತಿ ಇಲ್ಲಿದೆ ನೋಡಿ..

ಡಿವಿಜಿ ಸುದ್ದಿ, ದಾವಣಗೆರೆ: ಅಡಿಕೆ ಬೆಳೆ ಬಿಸಿಲಿನ ತಾಪಕ್ಕೆ ಕಾಂಡ ಸೀಳುವ ಸಂಭವವಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಬಗ್ಗೆ  ರೈತರು ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ತೋಟಗಾರಿಕೆ ಇಲಾಖೆ ಕೆಲವೊಂದು  ಸಲಹೆ-ಸೂಚನೆ ನೀಡಿದೆ.

ಸೂರ್ಯನ ಕಿರಣಗಳು ನೈರುತ್ಯ ದಿಕ್ಕಿನಿಂದ ನೇರವಾಗಿ ಅಡಿಕೆ ಮರಗಳ ಮೇಲೆ ಬೀಳುವುದರಿಂದ ಕಾಂಡಗಳು ಸುಟ್ಟಂತಾಗಿ ಸೀಳುತ್ತವೆ. ಕಾಂಡದ ಎಳೆಯ ಭಾಗ ಬಂಗಾರದ ಹಳದಿ ಬಣ್ಣಕ್ಕೆ ಮಾರ್ಪಟ್ಟು ನಂತರದಲ್ಲಿ ಬಿರುಕುಗಳು ಕಾಣಿಸಿಕೊಂಡು ಕಾಂಡಗಳು ಬಲಹೀನವಾಗುತ್ತದೆ. ಇಂತಹ ಬಿರುಕುಗಳ ಮೂಲಕ ರೋಗಾಣುಗಳು ಒಳಗೆ ಸೇರಿಕೊಂಡು ರೋಗ ತಗಲುವ ಸಾಧ್ಯತೆ ಹೆಚ್ಚಾಗಿದ್ದು, ಬಲವಾದ ಗಾಳಿ ಬೀಸಿದಾಗ ಮರಗಳು ಮುರಿದು ಬೀಳಿತ್ತವೆ.

ಮಂಜಾಗ್ರತಾ ಕ್ರಮಗಳು

  • ಸೂರ್ಯನ ಬೇಗೆಯಿಂದ ಮರದ ಕಾಂಡಗಳು ಸೀಳುವುದನ್ನು ತಪ್ಪಿಸಲು ತೋಟದ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಎತ್ತರಕ್ಕೆ ಬೆಳೆಯುವ ನೆರಳು ಸಸ್ಯಗಳು ಬೆಳಸಬೇಕು.
  • ಸಸಿಗಳನ್ನು ನೆಡುವಾಗ ಸರಿಯಾದ ದಿಕ್ಕಿನಲ್ಲಿ ನಾಟಿ ಮಾಡಿ ನೆರಳನ್ನು ಒದಗಿಸಬೇಕು.
  • 10 ಕೆ.ಜಿ ಸುಣ್ಣ, 2ಕೆ.ಜಿ ಬೆಲ್ಲ ಮತ್ತು ಅರ್ಧ ಕೆ.ಜಿ.ಮೈದಾ ಹಿಟ್ಟನ್ನು ನೀರಿನಲ್ಲಿ ಬೆರೆಸಿ ಮಿಶ್ರಣವನ್ನು ಕಾಂಡಗಳಿಗೆ ಬಳಿಯುವುದರಿಂದ ಮರಗಳನ್ನು ರಕ್ಷಿಸಬಹುದು.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಸಲಹಾ ಮತ್ತು ಮಾಹಿತಿ ಕೇಂದ್ರ, ದಾವಣಗೆರೆ ಸಂಪರ್ಕಿಸಬಹುದೆಂದು ಜಿ.ಪಂ ತೋಟಗಾರಿಕೆ ಉಪನಿರ್ದೇಶಕರು  ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top