ಡಿವಿಜಿ ಸುದ್ದಿ, ಹೊನ್ನಾಳಿ:ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡಿ, ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯ ಅಭಿವೃದ್ಧಿಯ ಹಿತದೃಷ್ಟಿಯಿಂದ ಸ್ಥಳೀಯ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡಿ, ಜಿಲ್ಲೆಯ ಉಸ್ತುವಾರಿ ವಹಿಸಬೇಕು ಎಂದು ತಿಳಿಸಿದರು.
ರಮೇಶ್ ಜಾರಕಿಹೊಳಿ ಬೇರೆ ಕಾರ್ಯನಿಮಿತ್ತ ದೆಹಲಿಗೆ ಹೋಗಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಲು ಹೋಗಿರಬಹುದು. ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಚರ್ಚಿಸಲು ನಾನೂ ದೆಹಲಿಗೆ ಹೋಗಬೇಕು ಅಂದುಕೊoಡಿದ್ದೇನೆ. ಹೀಗಾಗಿ, ಅವರು ದೆಹಲಿಗೆ ಹೋದ ತಕ್ಷಣ ಡಿಸಿಎಂ ಹುದ್ದೆ ಕೇಳುವುದಕ್ಕೇ ಹೋಗಿದ್ದಾರೆ ಎಂದು ಅರ್ಥೈಸುವುದು ತಪ್ಪು ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗುತ್ತಾರೆ. ಅವರು ಪ್ರಧಾನಮಂತ್ರಿ ಆಗಲಿಕ್ಕೆ ದೆಹಲಿಗೆ ಹೋಗಿದ್ದಾರೆ ಎಂದು ಹೇಳಲು ಆಗುತ್ತದೆಯೇ ಎಂದರಾಜ್ಯದಲ್ಲಿನ ಬೆಳೆ ಹಾನಿಗೆ ಸಂಬoಧಿಸಿದoತೆ 400 ಕೋಟಿ ರೂ.ಗಳಷ್ಟು ಪರಿಹಾರ ನೀಡಬೇಕು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಶೀಘ್ರವೇ ಇನ್ನೊಮ್ಮೆ ಒತ್ತಡ ಹೇರಲಾಗುವುದು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಜಿಪಂ ಸದಸ್ಯರಾದ ಎಂ.ಆರ್. ಮಹೇಶ್, ಉಮಾ ರಮೇಶ್, ಸಿ. ಸುರೇಂದ್ರನಾಯ್ಕ, ತಾಪಂ ಪ್ರಭಾರ ಅಧ್ಯಕ್ಷ ಕೆ.ಎಲ್. ರಂಗನಾಥ್, ನ್ಯಾಮತಿ ತಾಪಂ ಅಧ್ಯಕ್ಷ ಎಸ್.ಪಿ. ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಜಿ.ಎಸ್. ಸುರೇಶ್, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಮುಖಂಡರಾದ ಶಾಂತರಾಜ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.



