Connect with us

Dvgsuddi Kannada | online news portal | Kannada news online

ಅವೈಜ್ಞಾನಿಕ ವಿದ್ಯುತ್ ಬಿಲ್;  ಜಿಲ್ಲಾ ಕಾಂಗ್ರೆಸ್ ದೂರು: ಸರಿಪಡಿಸುವ ಭರವಸೆ ನೀಡಿದ ಕೆಪಿಟಿಸಿಎಲ್

ಪ್ರಮುಖ ಸುದ್ದಿ

ಅವೈಜ್ಞಾನಿಕ ವಿದ್ಯುತ್ ಬಿಲ್;  ಜಿಲ್ಲಾ ಕಾಂಗ್ರೆಸ್ ದೂರು: ಸರಿಪಡಿಸುವ ಭರವಸೆ ನೀಡಿದ ಕೆಪಿಟಿಸಿಎಲ್

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಅವೈಜ್ಞಾನಿಕವಾಗಿ ವಿದ್ಯುತ್ ಬಿಲ್ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ  ಇಂದು ಕೆಪಿಟಿಸಿಎಲ್ ಅಧಿಕಾರಿಗಳಿಗೆ ದೂರು ನೀಡಲಾಯಿತು.

ದಾವಣಗೆರೆಯಲ್ಲಿ ಮಾತ್ರವಲ್ಲ ರಾಜ್ಯವ್ಯಾಪಿ ಇದೇ ಸಮಸ್ಯೆಯಾಗಿದ್ದು ಎರಡರಿಂದ ಮೂರು ಪಟ್ಟು ಹೆಚ್ಚುವರಿ ಬಿಲ್ ಬಂದಿದೆ.  ಸಾಫ್ಟ್ವೇರ್ ನಲ್ಲಿ ಸರಿಪಡಿಸುವ ಅವಶ್ಯಕತೆ ಇದೆ, ಆದ್ದರಿಂದ ಬೆಂಗಳೂರು ವಿಭಾಗ ಮಟ್ಟದ ಕಚೇರಿಗೆ ತಮ್ಮ ದೂರನ್ನು ತಲುಪಿಸುವುದಾಗಿ ಕೆಪಿಟಿಸಿಎಲ್ ಅಧಿಕಾರಿಗಳು ತಿಳಿಸಿದರು.

ಸಾರ್ವಜನಿಕರಿಗೆ ಪ್ರತಿ ತಿಂಗಳು ಬರುವ ಬಿಲ್ ಗಿಂತ ಎರಡು ಮೂರು ಪಟ್ಟು ಹೆಚ್ಚು ಬಿಲ್ ಬಂದಿರುವುದರಿಂದ, ಇಲಾಖೆ ಇದನ್ನು ಸರಿಪಡಿಸುವ ತನಕ ರಾಜ್ಯವ್ಯಾಪಿ ಗ್ರಾಹಕರು ಬಿಲ್ ಕಟ್ಟಬಾರದು ಎಂದು ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಕೆಪಿಸಿಸಿಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್.ಹರೀಶ್ ಬಸಾಪುರ, ಪಕ್ಷದ ಮುಖಂಡರಾದ ವಿನಯ್ ಜೋಗಪ್ಪ ನವರ್, ದ್ರಾಕ್ಷಾಯಣಮ್ಮ, ಯುವರಾಜ್, ಎಚ್. ಹರೀಶ್, ಕರಿಬಸಪ್ಪ ಮುಂತಾದವರು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top