Connect with us

Dvgsuddi Kannada | online news portal | Kannada news online

ಮೇ 20 ವರೆಗೆ  ಭದ್ರಾ ನಾಲೆಗಳಲ್ಲಿ ನೀರು ಹರಿಸಲು ಮುಖ್ಯಮಂತ್ರಿಗಳಿಗೆ ಸಂಸದ ಜಿ.ಎಂ.ಸಿದ್ದೇಶ್ವರ ಆಗ್ರಹ

ದಾವಣಗೆರೆ

ಮೇ 20 ವರೆಗೆ  ಭದ್ರಾ ನಾಲೆಗಳಲ್ಲಿ ನೀರು ಹರಿಸಲು ಮುಖ್ಯಮಂತ್ರಿಗಳಿಗೆ ಸಂಸದ ಜಿ.ಎಂ.ಸಿದ್ದೇಶ್ವರ ಆಗ್ರಹ

ಡಿವಿಜಿ ಸುದ್ದಿ, ದಾವಣಗೆರೆ :  ಹರಿಹರ ಮತ್ತು ದಾವಣಗೆರೆ ತಾಲ್ಲೂಕಿನ ಕೊನೇ ಭಾಗದ ರೈತರಿಗೆ ಮೇ.20 ವರೆಗೆ ಭದ್ರಾ ನಾಲೆ ನೀರು ಹರಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಮುಖ್ಯಮಂತ್ರಿ ಬಿ.ಎಸ್ . ಅವರಿಗೆ ಮನವಿ ಮಾಡಿದ್ದಾರೆ.

ಇನ್ನೂ ಹದಿನೈದು ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಸುವ ಅವಶ್ಯಕತೆಯಿದ್ದು, ರೈತರಿಗೆ ನೀರಿನ ಅವಶ್ಯಕತೆ ಇದೆ. ಈಬ ಗ್ಗೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಿಗೆ  ಮೇ 20  ರವರೆಗೆ ಭದ್ರಾ ನಾಲೆಗಳಲ್ಲಿ ನೀರು ಹರಿಸುವಂತೆ ಪತ್ರ ಬರೆದು ವಾಸ್ತವಾಂಶ ವಿವರಿಸಿದ್ದರು.

ಈ ಪತ್ರವನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್‌ ಹಾಗೂ ಹರಿಹರ ಮಾಜಿ ಶಾಸಕ ಬಿ.ಪಿ.ಹರೀಶ್  ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು  ಭೇಟಿ ಮಾಡಿ ಸಂಸದರ ಪತ್ರ ನೀಡಿ ಭದ್ರಾ ನಾಲೆಗಳಲ್ಲಿ ನೀರು ಹರಿಸುವುದನ್ನು ಮುಂದುವರೆಸುವಂತೆ ಮನವಿ ಮಾಡಿಕೊಂಡರು.

bhadra water

ಜಿಲ್ಲಾ ಉಸ್ತುವಾರಿ ಸಚಿವರ, ಲೋಕಸಭಾ ಸದಸ್ಯರ  ಹಾಗೂ ಮಾಜಿ ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಅವರು ನಾಳೆ ಈ ವಿಷಯಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸುವ ಭರವಸೆ ನೀಡಿದ್ದಾರೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top