ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತರದ ಶಾಸಕ ಎಸ್.ಎ ರವೀಂದ್ರ ನಾಥ್ ಅವರ 74 ನೇ ಹುಟ್ಟುಹಬ್ಬ ಹಾಗೂ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ವಿಜಯಶೀಲರಾದ ಬಿಜೆಪಿಯ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ನ. 26 ರಂದು ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್, ದಾವಣಗೆರೆ ಉತ್ತರ ವಿಧಾಸಭಾ ಕ್ಷೇತ್ರದ ಶಾಸಕರು, ಪಕ್ಷದ ಹಿರಿಯರಾದ ಎಸ್.ಎ ರವೀಂದ್ರನಾಥ್ ಅವರ 74 ನೇ ಹುಟ್ಟುಹಬ್ಬ ಹಾಗೂ ಪಾಲಿಕೆಯಲ್ಲಿ ನೂತನವಾಗಿ ಆಯ್ಕೆಯಾದ ಬಿಜೆಪಿ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ನ. 26 ರಂದು ಹದಡಿ ರಸ್ತೆಯ ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಿದೆ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ವಹಿಸಿಕೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ಅಭಿನಂದನಾ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ದೇಶ್ವರ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಕರುಣಾಕರ ರೆಡ್ಡಿ, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರಪ್ಪ, ಪ್ರೊ. ಲಿಂಗಣ್ಣ, ಡಾ. ಶಿವಯೋಗಿಸ್ವಾಮಿ, ಮಾಜಿ ಶಾಸಕರಾದ ಎಂ. ಬಸವರಾಜನಾಯ್ಕ, ಬಿ.ಪಿ. ಹರೀಶ್, ಜಿ.ಪಂ. ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಉಪಾಧ್ಯಕ್ಷ ಸುರೇಂದ್ರ ನಾಯ್ಕ್ ಭಾಗಿಯಾಗಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಬಿ.ಜಿ. ಸಂಗಜ್ಜ ಗೌಡ್ರು, ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ , ಪಾಲಿಕೆ ಸದಸ್ಯ ಎಸ್.ಟಿ. ವೀರೇಶ್, ಮುಖಂಡರಾದ ಉಮೇಶ್ ಪಾಟೀಲ್, ಶಿವರಾಜ್ ಪಾಟೀಲ್ ಉಪಸ್ಥಿತರಿದ್ದರು.



