ಬಿಪಿಎಲ್ ಕಾರ್ಡ್ ದಾರರೇ ಎಚ್ಚರ.. ಎಚ್ಚರ..! ಅಕ್ರಮ ಕಾರ್ಡ್ ಹೊಂದಿದ್ದರೆ ಬೀಳುತ್ತೆ ಭಾರೀ ದಂಡ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ,ದಾವಣಗೆರೆ: ಬಿಪಿಎಲ್ ಕಾರ್ಡ್ ದಾರರೇ ಎಚ್ಚರ.. ಎಚ್ಚರ..! ನೀವು ಏನಾದ್ರೂ, ಅಕ್ರಮ  ಬಿಪಿಎಲ್ ಕಾರ್ಡ್ ಹೊಂದಿದ್ದೀರಾ..?  ಒಂದು ವೇಳೆ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ದರೆ ಭಾರೀ ದಂಡ ಕಟ್ಟಬೇಕಾಗುತ್ತದೆ.

ನೀವೇ ಕಾರ್ಡ್ ವಾಪಸ್ಸು ನೀಡಿದರೆ, ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗುವುದು. ಸರ್ಕಾರದ ಕಣ್ಣು ತಪ್ಪಿಸಿ ಅಕ್ರಮವಾಗಿ ಪಡಿತರ ಪಡೆಯುತ್ತಿದ್ದಲ್ಲಿ  ಭಾರೀ ದಂಡ ಬೀಳಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದ್ಧಾರೆ.

bpl card

ಅನರ್ಹರು ನಿಗದಿತ ದಿನಾಂಕದೊಳಗೆ ಆಯಾ ತಾಲ್ಲೂಕು ಕಚೇರಿಯಲ್ಲಿ  ಬಿಪಿಎಲ್ ಕಾರ್ಡ್  ರದ್ದು ಪಡಿಸಬೇಕು. ಇಲ್ಲವೇ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.  ಸ್ವತಃ ನೀವೇ ಪಡಿತರ ಚೀಟಿ  ಹಿಂತಿರುಗಿಸಿದರೆ  ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ. ಅವಧಿ ಮುಗಿದ ನಂತರ ಇಲಾಖೆಯೇ ಕಾರ್ಯಾಚರಣೆ ನಡೆಸಿದಾಗ ಅಕ್ರಮ ಕಾರ್ಡ್ ಪತ್ತೆಯಾದರೆ ಭಾರೀ  ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಅನರ್ಹರು ಯಾವ ದಿನಾಂಕದಿಂದ  ಪಡಿತರ ಪದಾರ್ಥ ಪಡೆದಿದ್ದರೋ, ಅಲ್ಲಿಂದ ಪ್ರತಿ ಕೆ.ಜಿ.ಗೆ ಮುಕ್ತ ಮಾರುಕಟ್ಟೆಯ ಬೆಲೆಯ ಪ್ರಕಾರ ಹಣವನ್ನು ವಸೂಲಿ ಮಾಡಲಾಗುವುದು. ಜೊತೆಗೆ ಕಾನೂನು ರೀತಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.

ಯಾರೆಲ್ಲ ಅಕ್ರಮ ಬಿಪಿಎಲ್ ಕಾರ್ಡ್ ದಾರರು..?

ಸರ್ಕಾರಿ ನೌಕರರು 

ಸರ್ಕಾರಿ ಅನುದಾನಿತ ನೌಕರರು

ನಿಗಮಗಳು, ಮಂಡಳಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ

ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು

 4 ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು

ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಗಳಿಗಿಂತ ಹೆಚ್ಚಿರುವವರು

ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪಡಿತರ ಕಾರ್ಡ್ ಹೊಂದಿದವರು

ಯಾವುದು ಅಕ್ರಮವಲ್ಲ..?

ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿದವರು

ನಗರ ಪ್ರದೇಶದಲ್ಲಿ 1000 ಚ.ಅಡಿಗಳಿಗಿಂತಲೂ ಹೆಚ್ಚಿನ ವಿಸ್ತೀರ್ಣದ  ಮನೆ ಹೊಂದಿದವರು

ಕುಟುಂಬ ನಿರ್ವಹಣೆ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಹೊಂದಿದವರು

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *