Connect with us

Dvgsuddi Kannada | online news portal | Kannada news online

ಪೌರತ್ವ ಕಾಯ್ದೆ ಅಂಗೀಕರಿಸಿದಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆ

Home

ಪೌರತ್ವ ಕಾಯ್ದೆ ಅಂಗೀಕರಿಸಿದಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆ

ಡಿವಿಜಿ ಸುದ್ದಿ, ದಾವಣಗೆರೆ:  ಪೌರತ್ವ ಕಾಯ್ದೆಯನ್ನು ಎರಡು ಸದಸನದಲ್ಲಿ ಅಂಗೀಕರಿಸಿದಕ್ಕೆ ಶ್ರೀ ರಾಮ ಸೇನಾ ಕರ್ನಾಟಕ ಸಂಘನೆಯಿಂದ ಕೇಂದ್ರ ಸರ್ಕಾರಕ್ಕೆ ಅಭಿನಂದನಾ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಕೇಂದ್ರದ ಗೃಹ ಸಚಿವರಿಗೆ ಸಲ್ಲಿಸಲಾಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ಕುಮಾರ್ ನಾಯಕ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ದೇಶದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಇದಕ್ಕೆ ಶ್ರೀರಾಮ ಸೇನೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತದೆ.

ನೆರೆಯ ದೇಶದ ಅಲ್ಪ ಸಂಖ್ಯಾತರಿಗೆ ಭಾರತ ಪೌರತ್ವ ನೀಡಿ ದೇಶದಲ್ಲಿ ಜೀವನ ಸಾಗಿಸಲು ಅವಕಾಶ ನೀಡಿದ ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರಕ್ಕೆ ಅಭಿನಂದನೆಗಳು.ಮಸೂದೆ  ವಿರೋಧಿಸಿ ಪ್ರತಿಭಟನೆ, ಅಶಾಂತಿ, ಸಾರ್ವಜನಿಕ ಆಸ್ತಿ ಹಾನಿ, ಕಾನೂನು ಕೈಗೆತ್ತಿಕೊಳ್ಳುವ ಕಿಡಿಗೇಡಿಗಳ ಮೇಲೆ ಕಾನೂನು ರೀತಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

To Top