ನ. 19 ರಂದು ಕೆನರಾ ಬ್ಯಾಂಕ್  ಸಂಸ್ಥಾಪಕ ದಿನಾಚರಣೆ, ಕನ್ನಡ ರಾಜ್ಯೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ದಾವಣಗೆರೆ: ಕೆನರಾ ಬ್ಯಾಂಕ್ 114ನೇ ಸಂಸ್ಥಾಪಕ ದಿನಾಚರಣೆ ಹಾಗೂ 64 ನೇ ಕನ್ನಡ ರಾಜ್ಯೋತ್ಸವನ್ನು  ನ. 19 ರಂದು  ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಸಂಜೆ 6.00 ಗಂಟೆಗೆ ಆಯೋಜಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್‌ನ  ದಾವಣಗೆರೆ  ಕ್ಷೇತ್ರೀಯ  ಕಾರ್ಯಾಲಯದ ಸಹಾಯಕ ಮಹಾಪ್ರಬಂಧಕರಾದ ಶ್ರೀ ಹೆಚ್. ರಘುರಾಜ್‌ರವರು  ವಹಿಸಿಕೊಳ್ಳಲಿದ್ದಾರೆ.  ಹಿರಿಯ ಸಾಹಿತಿಗಳು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೆಚ್.ಬಿ. ಮಂಜುನಾಥ್‌ ಉದ್ಘಾಟಸಿ, ಕನ್ನಡ ಭಾಷಾ ಪ್ರೇಮದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ೧೧೪ನೇ  ಕೆನರಾಬ್ಯಾಂಕ್ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಸಂಸ್ಥಾಪಕರಾದ ಕೀರ್ತಿಶೇಷ  ಅಮ್ಮೆಂಬಳ ಸುಬ್ಬಾರಾವ್ ಪೈ ಅವರ ಸಂಸ್ಮರಣೆ ನಡೆಯಲಿದೆ. ವಿಶ್ರಾಂತ ವಿಭಾಗೀಯ ಪ್ರಬಂಧಕರಾದ ಎನ್. ಟಿ. ಯರ‍್ರಿಸ್ವಾಮಿ ಸಂಸ್ಮರಣಾ ದಿನಾಚಾರಣೆ ಬಗ್ಗೆ ಮಾತನಾಡಲಿದ್ದಾರೆ ಎಂದು  ಶ್ರೀಮತಿ ಜಿ.ಆರ್. ನಾಗರತ್ನ ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ  ಈ ವರ್ಷ ಕರ್ನಾಟಕ ಸರ್ಕಾರದಿಂದ  ರಾಜ್ಯೋತ್ಸವ  ಪ್ರಶಸ್ತಿ ಪುರಸ್ಕೃತ ಎಸ್.ಟಿ. ಶಾಂತಗಂಗಾಧರ್, ಕೊಡಗನೂರು ಜಯಕುಮಾರ್ ಮತ್ತು ಸಾಲುಮರದ ವೀರಾಚಾರ್ ಅವರನ್ನು  ಅಭಿನಂದಿಸಿ ಸನ್ಮಾನಿಸುವ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆನರಾಬ್ಯಾಂಕ್‌ನ  ಕ್ಷೇತ್ರೀಯ ಕಾರ್ಯಾಲಯದ ವಿಭಾಗೀಯ ಪ್ರಬಂಧಕರಾದ ಶ್ರೀ ಬಿ.ಜಿ. ದೊಡ್ಡಮನಿಯವರು ತಿಳಿಸಿದರು.

bank

ಸಭಾ ಕಾರ್ಯಕ್ರಮದ ನಂತರ ಕೆನರಾಬ್ಯಾಂಕ್ ಉದ್ಯೋಗಿ  ಕೆ. ರಾಘವೇಂದ್ರ ನಾಯರಿ ಮತ್ತು ಇತರ ಹವ್ಯಾಸಿ ಕಲಾವಿದರ  ಕೂಡುವಿಕೆಯಲ್ಲಿ  “ಜಾಂಬವತಿ ಕಲ್ಯಾಣ” ಎನ್ನುವ  ಕಥಾನಕದ ಯಕ್ಷಗಾನ ಪ್ರದರ್ಶನ, ಬೆಳಕು ಜಾನಪದ ಕಲಾ ತಂಡದ ಶ್ರೀಮತಿ ಸಿ.ಕೆ. ರುದ್ರಾಕ್ಷಿಬಾಯಿ  ಮತ್ತು ಅವರ ಶಿಷ್ಯವೃಂದದಿಂದ ಸಂಗೀತ ಮತ್ತು ನೃತ್ಯ ಪ್ರದರ್ಶನ ಹಾಗೂ ಕೆನರಾಬ್ಯಾಂಕ್ ಉದ್ಯೋಗಿಗಳಿಂದ  ಸಾಂಸ್ಕೃತಿಕ  ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆನರಾ ಬ್ಯಾಂಕ್ ಉದ್ಯೋಗಿಗಳಿಗೆ  ಏರ್ಪಡಿಸಿದ್ದ ಭಾಷಣ  ಮತ್ತು  ಸಂಗೀತ ಸ್ಪರ್ಧೆಯಲ್ಲಿ  ವಿಜೇತರಾದವರಿಗೆ ಬಹುಮಾನ ವಿತರಣೆ ಕೂಡಾ ನಡೆಯಲಿವೆ ಎಂದು ಕೆನರಾಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯದ ವ್ಯವಸ್ಥಾಪಕರಾದ ಎಸ್. ಮಹೇಶ್ವರನ್  ತಿಳಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *