ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ , ದಾವಣಗೆರೆ:  ಜಿಲ್ಲಾ ಕಾಂಗ್ರೆಸ್ ನಿಂದ  ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ನಗರದ ಶಾಮನೂರು ರಸ್ತೆಯಲ್ಲಿರುವ ಮಹಾನಂದಿ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ,  ಯುಪಿಎ ಸರ್ಕಾರದಲ್ಲಿ ಕಚ್ಚಾತೈಲ ಬೆಲೆ ಹೆಚ್ಚಿದ್ದರೂ ಸಹ ಪೆಟ್ರೋಲ್ ಬೆಲೆ 80 ರು ದಾಟಿರಲಿಲ್ಲ. ಆದರೆ ಈಗ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಸಹ ಪೆಟ್ರೋಲ್ ಡೀಸೆಲ್ ಬೆಲೆ ಪ್ರತಿದಿನ ಏರುತ್ತ ಹೋಗುತ್ತಿದೆ,. ಇದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದರು.

ಈ  ಸಂದರ್ಭದಲ್ಲಿ ವಿಪಕ್ಷ ನಾಯಕ ಎ. ನಾಗರಾಜ್,  ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಪಾಲಿಕೆ ಸದಸ್ಯ ಕೆ.ಚಮನ್ ಸಾಬ್,  ಗಡಿ ಗುಡಾಳ್ ಮಂಜುನಾಥ್, ಕಲ್ಲಳ್ಳಿ ನಾಗರಾಜ್, ವಿನಾಯಕ ಪೈಲ್ವಾನ್, ಜಿಲ್ಲಾ  ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಎಸ್.ಎಂ. ರುದ್ರೇಶ್, ಹೆಚ್. ಜಯಪ್ಪ, ಕೆ. ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ರಘು ದೊಡ್ಮನಿ, ಏನ್.ಎಸ್.ಯು.ಐ  ನ ಶಶಿಧರ್,  ಮಹಿಳಾ ಕಾಂಗ್ರೆಸ್ ನ ದ್ರಾಕ್ಷಾಯಣಮ್ಮ, ರಾಜೇಶ್ವರಿ, ಗೀತಾ,ವೀಣಾ  ಕಿಸಾನ್ ಘಟಕದ, ಪ್ರವೀಣ್ ಕುಮಾರ್, ಮುಖಂಡರಾದ ಶಮಿ ದೇವರಹಟ್ಟಿ,  ಸತೀಶ್ ಶಾಗಾಲಿ, ಅಣಜಿ ಅಂಜಿನಪ್ಪ, ಆರೋಗ್ಯ ಸ್ವಾಮಿ, ಕಲ್ಪನಹಳ್ಳಿ ನಾಗರಾಜ್, ಯುವರಾಜ್, ಶಾಮನೂರು ಸುರೇಶ್, ಮಲ್ಲಿಕಾರ್ಜುನ್ ಇಂಗಳೇಶ್ವರ, ಮಹಾವೀರ್ ಮುಂತಾದವರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *