ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಕಳೆದ 18 ದಿನದಿಂದ ಸತತವಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಗರದ ಎಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಒಂದೇ ಬಾರಿಗೆ ಪ್ರತಿಭಟನೆ ನಡೆಸಿದರು.

ಸತತವಾಗಿ ಇಂಧನ ಬೆಲೆ ಏರಿಕೆ ಆಗುತ್ತಿದ್ದರೂ, ಕೇಂದ್ರ ಸರ್ಕಾರ ನಿಯಂತ್ರಣಕ್ಕೆ ತರುತ್ತಿಲ್ಲ.  ಕೇಂದ್ರ ಸರ್ಕಾರ  ಜನ ಸಾಮಾನ್ಯರ ಮೇಲೆ ಅನಗತ್ಯವಾಗಿ ಹೊರೆ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

congress protes pertol bunk 2

ಲಕ್ಷ್ಮಿ ಫ್ಲೋರ್ ಮಿಲ್ ಮುಂಭಾಗದ ಪೆಟ್ರೋಲ್ ಬಂಕ್ ನಲ್ಲಿ ಎಸ್ಸಿ ಘಟಕದ ಸಹಯೋಗದೊಂದಿಗೆ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶವಸಂಸ್ಕಾರದ ಅಣಕು ಪ್ರದರ್ಶಿಸಿದರು.  ಜಿಲ್ಲಾ ಕಾಂಗ್ರೆಸ್ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ನಗರದ 25ಕ್ಕೂ ಹೆಚ್ಚು  ಬಂಕುಗಳ ಮುಂದೆ ಪ್ರತಿಭಟನೆ ನಡೆಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಇದರಿಂದ  ಜನಸಾಮಾನ್ಯರ ಜೀವನ ನಡೆಸುವುದು ಕಷ್ಟವಾಗಿದೆ.  ಜನರ ನೆರವಿಗೆ  ಬಾರಬೇಕಾದ ಕೇಂದ್ರ ಸರ್ಕಾರ, ಜನರ  ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ ಮಂಜಪ್ಪ ಟೀಕಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *