ಡಿವಿಜಿ ಸುದ್ದಿ, ದಾವಣಗೆರೆ: ಚೀನಾ ವಸ್ತುಗಳ ಆಮದು ನಿಷೇಧಸಬೇಕು ಎಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಗುಂಡಿ ಮಹದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್. ಕೆ. ಶೆಟ್ಟಿ, ನಮ್ಮ ದೇಶದಲ್ಲಿ ಉತ್ಪಾದನೆಯಾಗುವ ವಸ್ತುಗಳನ್ನು ನಾವು ಉಪಯೋಗಿಸಬೇಕಿದೆ. ಈ ಪ್ರತಿಭಟನೆ ಮೂಲಕ ಚೀನಾ ವಸ್ತುಗಳ ಆಮದು ನಿಷೇಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದರು.
ಪಾಲಿಕೆ ಮಾಜಿ ಸದಸ್ಯ ಕೆ.ಜಿ. ಶಿವಕುಮಾರ್ ಮಾತನಾಡಿ, ದೇಶದ ಪ್ರತಿಯೊಬ್ಬರು ಚೀನಾ ವಸ್ತುಗಳನ್ನು ವಿರೋಧಿಸಿ ದೇಶಾಭಿಮಾನ ತೋರಬೇಕು ಎಂದು ತಿಳಿಸಿದರು.
ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್ ಮಾತನಾಡಿ ಚೀನಾ ವಸ್ತುಗಳನ್ನು ನಾವು ಉಪಯೋಗದಿಂದ ದೇಶದಲ್ಲಿ ಗುಡಿ ಮತ್ತು ಸಣ್ಣ ಕೈಗಾರಿಕೆಗಳಿಗೆ ಪೆಟ್ಟು ಬೀಳುತ್ತಿದೆ. ಆರ್ಥಿಕ ಸ್ಥಿತಿ ಪತನದತ್ತ ಸಾಗುತ್ತಿದೆ ಎಂದರು.

ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಮಾತನಾಡಿ ನಾವು ಸದಾ ದೇಶದ ಭದ್ರತೆ ಮತ್ತು ಸೈನಿಕರ ಬೆಂಬಲವಾಗಿದ್ದು ನಮ್ಮ ಸೈನಿಕರ ಮೇಲೆ ನಡೆದ ದಾಳಿಗೆ ನಾವು ಪ್ರತೀಕಾರ ತೀರಿಸಬೇಕು ಹಾಗೂ ಚೈನಾ ವಸ್ತುಗಳನ್ನು ನಿಷೇಧಿಸಬೇಕು ಎಂದು ತಿಳಿಸಿದರು,
ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅನಿತಾ ಬಾಯಿ ಮಾಲತೇಶ್ ಮಾತನಾಡಿ ಮುಂದಿನ ದಿನಗಳಲ್ಲಿ ಗಣೇಶ ಹಬ್ಬ ಹಾಗೂ ದೀಪಾವಳಿ ಹಬ್ಬದಲ್ಲಿ ಚೀನಾ ವಸ್ತುಗಳನ್ನು ಉಪಯೋಗಿಸದೆ, ದೇಧಿಯ ಉತ್ಪನ್ನ ಬಳಸಬೇಕಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್ ಮುಖಂಡರಾದ ದಾದಾಪೀರ್, ಕೆ.ಎಲ್. ಹರೀಶ್ ಬಸಾಪುರ, ಮುಜಾಹಿದ್, ಶಶಿಧರ್ ಪಾಟೀಲ್, ಹಾಲೇಶ್, ಪ್ರವೀಣ್ ಕುಮಾರ್, ಲಿಯಾಖತ್ ಅಲಿ, ರಾಕೇಶ್, ಅಬ್ದುಲ್ ಜಬ್ಬಾರ್, ಬಾಷಾ,ಬಾಬ್ ಜಾನ್, ದಾದಾಪೀರ್, ಜಿಕ್ರಿಯ, ಸೈಯದ್ ಮರ್ಥನ್, ಹಾಲೇಶ್ ಬಸವನಾಳ, ನವೀನ್, ಗಂಗಾಧರ್, ಮಾರುತಿ, ಆಶಾ ಮುರಳಿ, ಜಯಶ್ರೀ, ರಾಧಾಬಾಯಿ, ದಿಶಾ, ಸಂಗಮ್ಮ, ಮಂಜುಳಾ, ಮಂಗಳ, ಮಂಜಮ್ಮ, ಗೀತಾ ಚಂದ್ರಶೇಖರ್, ರೆಹಜನ್, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಸುನಿತಾ ಭೀಮಣ್ಣ, ಇಂದ್ರಮ್ಮ ಮುಂತಾದವರು ಉಪಸ್ಥಿತರಿದ್ದರು.



