ಡಿವಿಜಿ ಸುದ್ದಿ, ದಾವಣಗೆರೆ: ದೆಹಲಿಯ ತಬ್ಲೀಗ್ ಜಮಾತ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಚನ್ನಗಿರಿಯ 11 ಜನ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಧರ್ಮ ಸಭೆಯಲ್ಲಿ ಚನ್ನಗಿರಿಯ 11 ಮಂದಿ ಭಾಗಿಯಾಗಿದ್ದರು. ಸ್ಥಳೀಯರು ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ಚನ್ನಗಿರಿಯ 12 ಜನರನ್ನು ಪತ್ತೆ ಹಚ್ಚಿದ್ದು, 11 ಜನರನ್ನು ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಇನ್ನೊಬ್ಬ ಹೊರ ರಾಜ್ಯದಲ್ಲಿ ಇದ್ದಾನೆ ಎಂದು ತಿಳಿಸಿದರು.
ಕೊರೊನಾ ವೈರಸ್ ನಿಯಂತ್ರಣ ಸಭೆ ಬಳಿಕೆ ಕೆ.ಎಸ್ ಈಶ್ವರಪ್ಪ ಮಾತನಾಡಿ, ಬೇಜವಾಬ್ದಾರಿ ಜನರಿಂದ ಕೊರೊನ ಸೊಂಕು ಹೆಚ್ಚಾಗಲು ಕಾರಣ. ದಾವಣಗೆರೆಯಿಂದ 12 ಶಿವಮೊಗ್ಗದಿಂದ 52 ಜನ ಧರ್ಮ ಸಭೆಯಲ್ಲಿ ಭಾಗಿಯಾಗಿದ್ದಾರೆ . ಈ ಬಗ್ಗೆ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ ಎಂದರು.



