Connect with us

Dvgsuddi Kannada | online news portal | Kannada news online

ಕೊರೊನಾ ವೈರಸ್ ಗೆ ತತ್ತರಿಸಿದ ದಾವಣಗೆರೆ; ಇಂದು ಮತ್ತೆ 14 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 61 ಕ್ಕೆ ಏರಿಕೆ

ಪ್ರಮುಖ ಸುದ್ದಿ

ಕೊರೊನಾ ವೈರಸ್ ಗೆ ತತ್ತರಿಸಿದ ದಾವಣಗೆರೆ; ಇಂದು ಮತ್ತೆ 14 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 61 ಕ್ಕೆ ಏರಿಕೆ

ಡಿವಿಜಿ ಸುದ್ದಿ, ದಾವಣಗೆರೆ: ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ  ಇಂದು ಕೂಡ ಮುಂದುವರಿದಿದ್ದು, ಬರೊಬ್ಬರಿ 14 ಮಂದಿಯಲ್ಲಿ ಹೊಸದಾಗಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಈ ಮೂಲಕ ದಾವಣಗೆರೆ ತತ್ತರಿಸಿ ಹೋಗಿದ್ದು, ಇಲ್ಲಿನ ಜನರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ.

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸಸತವಾಗಿ ಕೊರೊನಾ ವೈರಸ್ ಸಂಖ್ಯ ಏರುತ್ತಲೇ ಇದ್ದು, ಇಂದು ಹೊಸದಾಗಿ 14 ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 61 ಕೊರೊನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಏ. 29 ರಂದು ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ಭಾಷಾನಗರದಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಇದಾದನಂತರ ದಾವಣಗೆರಯಲ್ಲಿ ದಿನದಿಂದ ದಿನಕ್ಕೆ ಏರುತ್ತಲ್ಲೇ ಸಾಗಿದ್ದು, ಕೇವಲ ಎಂಟತ್ತು ದಿನದಲ್ಲಿ 61 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಇನ್ನಷ್ಟು ಆತಂಕ ಪಡುವಂತಾಗಿದೆ.

ನಿನ್ನೆಯಷ್ಟೇ 3 ಪ್ರಕರಣ ಪತ್ತೆಯಾಗುವ ಮೂಲಕ ಕೊರೊನಾ 47ಕ್ಕೆ ಏರಿಕೆಯಾಗಿತ್ತು. ಇಂದು ಬರೊಬ್ಬರಿ 14 ಪ್ರಕರಣ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ 61 ಪ್ರಕರಣ ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 61 ಪ್ರಕರಣದಲ್ಲಿ 4 ಪಾಸಿಟಿವ್ ಪ್ರಕಣಗಳು ಮೃತಪಟ್ಟಿದ್ದು, ಇನ್ನು 2 ಕೇಸ್ ಗಳು ಗುಣಮುಖರಾಗಿದ್ದು, ಇನ್ನು 55 ಪ್ರಕರಣಗಳು ಜಿಲ್ಲೆಯಲ್ಲಿ ಆಕ್ಟಿವ್ ಆಗಿ ಇದ್ದಂತಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top