Connect with us

Dvgsuddi Kannada | online news portal | Kannada news online

ಚನ್ನಗಿರಿಯಲ್ಲಿ ಅಮಾನವೀಯವಾಗಿ ಶವಸಂಸ್ಕಾರ:  ಅಧಿಕಾರಿಗಳಿಗೆ ಕಾರಣ ಕೇಳಿ ಡಿಸಿ  ನೋಟಿಸ್

ಚನ್ನಗಿರಿ

ಚನ್ನಗಿರಿಯಲ್ಲಿ ಅಮಾನವೀಯವಾಗಿ ಶವಸಂಸ್ಕಾರ:  ಅಧಿಕಾರಿಗಳಿಗೆ ಕಾರಣ ಕೇಳಿ ಡಿಸಿ  ನೋಟಿಸ್

ಡಿವಿಜಿ ಸುದ್ದಿ, ದಾವಣಗೆರೆ:  ಜೂ.17 ರಂದು ಮೃತಪಟ್ಟ ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿಯನ್ನು  ವೈದ್ಯಕೀಯ ಶಿಷ್ಟಾಚಾರದಂತೆ ವಶಸಂಸ್ಕಾರ  ನಿರ್ವಹಿಸದೇ ಇರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದಕ್ಕೆ ಸಂಬಂಧಿಸಿದ ವೈದ್ಯರು ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಕೋವಿಡ್ 19 ಸಾಂಕ್ರಾಮಿಕ ರೋಗದ ನಿಯಂತ್ರಣ ಹಿನ್ನೆಲೆ ಅಧಿಕಾರಿ ನೌಕರರಿಗೆ ನಿರ್ದೇಶನ ನೀಡಲಾಗಿರುತ್ತದೆ .  ಜಿಲ್ಲಾಡಳಿತದಿಂದಲೂ ಸಹ ಸಾಕಷ್ಟು ಮಾರ್ಗದರ್ಶನ ನೀಡಲಾಗಿರುತ್ತದೆ. ಕೊರೊನಾ ರೋಗಾಣುವಿನಿಂದ ವ್ಯಕ್ತಿ ಮೃತಪಟ್ಟ ಪ್ರಕರಣದಲ್ಲಿ ಅವರ ಅಂತ್ಯಕ್ರಿಯೆಯನ್ನು ಹೇಗೆ ನಡೆಸಬೇಕೆಂಬ ಕುರಿತು ಸರ್ಕಾರ ಎಸ್‍ಓಪಿಯನ್ನು ಹೊರಡಿಸಿದ್ದು ಅದರಂತೆ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಆದರೆ ಜೂ.17 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿಯಾದ ವೃದ್ದೆಯ ಮೃತದೇಹವನ್ನು ವೈದ್ಯಕೀಯ ಶಿಷ್ಟಾಚಾರದಂತೆ ನಿರ್ವಹಿಸಿರುವುದಿಲ್ಲವೆಂದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ.

ಬಳ್ಳಾರಿ ನಂತರ ದಾವಣಗೆರೆಯಲ್ಲಿ ಅಮಾನವೀಯ ರೀತಿಯಲ್ಲಿ ಕೊರೊನಾ ಸೋಂಕಿತರ ಶವಸಂಸ್ಕಾರ..!

Posted by Dvgsuddi on Wednesday, July 1, 2020

ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ 56 ವರ್ಷದ ವೃದ್ದೆಯ ಮೃತದೇಹವನ್ನು ಚನ್ನಗಿರಿಯ ಹೆದ್ದಾರಿ ಬಳಿ ಇರುವ ವೀರಶೈವ ರುದ್ರಭೂಮಿಯಲ್ಲಿ ಜೆಸಿಬಿಯಲ್ಲಿ ತೆಗೆದುಕೊಂಡು ಹೋಗಿ ಕಸ ಬಿಸಾಡುವಂತೆ ಬಿಸಾಡಿ ಶವಸಂಸ್ಕಾರ ಮಾಡಿದ ತಾಲ್ಲೂಕು ಆಡಳಿತ ಎಂದು ವರದಿಯಾಗಿದೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಒಂದು ವೇಳೆ ನಿಜವಾಗಿದ್ದಲ್ಲಿ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿರುವ ಪ್ರಯುಕ್ತ ಜಿಲ್ಲಾಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭು, ತಾಲ್ಲೂಕು ವೈದ್ಯಾಧಿಕಾರಿ ಡಾ.ಗಿರಿ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್, ತಹಶೀಲ್ದಾರ್ ಪುಟ್ಟರಾಜುಗೌಡ, ಕೋವಿಡ್ ನೋಡಲ್ ಅಧಿಕಾರಿ ಡಾ.ಮುರಳಿ ಇವರಿಗೆ ಕಾರಣ ಕೇಳಿ ನೋಟಿಸ್ ನೀಡಿ, ಜು.3 ರೊಳಗೆ ಲಿಖಿತ ವಿವರಣೆಯನ್ನು ಖುದ್ದು ಹಾಜರಾಗಿ ನೀಡುವಂತೆ ಸೂಚಿಸಿದ್ದಾರೆ. ವಿವರಣೆ ನೀಡುವುದು ತಪ್ಪಿದಲ್ಲಿ ನಿಯಮಾನುಸಾರ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top