ದಾವಣಗೆರೆ: ಇನ್ನೆರಡು ದಿನದಲ್ಲಿ ಕೊರೊನಾದಿಂದ ಗುಣಮುಖರಾದ 15 ಜನ ಬಿಡುಗಡೆಗೆ ಸಿದ್ಧತೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಸತತವಾಗಿ ಕೊರೊನಾ ಪಾಸಿಟಿವ್ ಕೇಸ್ ಗಳಿಂದ ತತ್ತರಿಸಿ ಹೋಗಿದ್ದ ದಾವಣಗೆರೆಯಲ್ಲಿ ಮತ್ತೆ 15 ಜನ ಗುಣಮುಖರಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಗೆ ಸಿದ್ಧತೆ ನಡೆದಿದೆ.

corona new

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಭೈರತಿ ಬಸವರಾಜ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ರಾಘವನ್, ಎಂಟತ್ತು ದಿನಗಳ ಹಿಂದೆ  ಕೊರೊನಾ ಪಾಸಿಟಿವ್ ಕೇಸ್‍ಗಳ ಪೈಕಿ ದಾವಣಗೆರೆ  4ನೇ ಸ್ಥಾನದಲ್ಲಿತ್ತು. ಆದರೆ ಇದೀಗ 7ನೇ ಸ್ಥಾನದಲ್ಲಿದೆ. ಸಕ್ರಿಯ ಕೇಸ್‍ಗಳ ಪೈಕಿ 3ನೇ ಸ್ಥಾನದಲ್ಲಿದ್ದ ಜಿಲ್ಲೆ ಇಂದು  10ನೇ ಸ್ಥಾನಕ್ಕೆ ತಲುಪಿದೆ. ಜಿಲ್ಲೆಯಲ್ಲಿ 136 ಕೋವಿಡ್ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಅದರಲ್ಲಿ 65 ಕೇಸ್‍ಗಳು ಬಿಡುಗಡೆ ಮಾಡಲಾಗಿದೆ. 4 ಸಾವು ಸಂಭವಿಸಿದೆ ಎಂದರು.

ಇನ್ನೆರಡು ದಿನಗಳಲ್ಲಿ 15 ಜನರನ್ನು ಬಿಡುಗಡೆ ಮಾಡಲಾಗುವುದು. ಇದುವರೆಗೂ 6964 ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಅದರಲ್ಲಿ 136 ಪಾಸಿಟಿವ್ ಬಂದಿದೆ. 5287 ನೆಗೆಟಿವ್ ಕೇಸ್ ಬಂದಿದೆ. 14 ಕಂಟೈನ್‍ಮೆಂಟ್ ಜೋನ್ ಮಾಡಲಾಗಿದೆ. ಅದರಲ್ಲಿ ಹೆಚ್ಚಾಗಿ ಜಾಲಿನಗರ ಹಾಗೂ ಇಮಾಮ್ ನಗರದಲ್ಲಿ ಪ್ರಕರಣ ಕಂಡುಬಂದಿದೆ. 250 ಐಸೋಲೇಷನ್ ಬೆಡ್ ವಾರ್ಡ್ ಹಾಗೂ 50 ಐಸಿಯು ಬೆಡ್ ವಾರ್ಡ್ ತಯಾರು ಮಾಡಿಕೊಳ್ಳಲಾಗಿದೆ. ಜೊತೆಗೆ ಹೊರ ರಾಜ್ಯಗಳಿಂದ ಬಂದ 259 ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *