ಡಿವಿಜಿ ಸುದ್ದಿ, ದಾವಣಗೆರೆ: ಸತತವಾಗಿ ಕೊರೊನಾ ಪಾಸಿಟಿವ್ ಕೇಸ್ ಗಳಿಂದ ತತ್ತರಿಸಿ ಹೋಗಿದ್ದ ದಾವಣಗೆರೆಯಲ್ಲಿ ಮತ್ತೆ 15 ಜನ ಗುಣಮುಖರಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಗೆ ಸಿದ್ಧತೆ ನಡೆದಿದೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಭೈರತಿ ಬಸವರಾಜ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ರಾಘವನ್, ಎಂಟತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಕೇಸ್ಗಳ ಪೈಕಿ ದಾವಣಗೆರೆ 4ನೇ ಸ್ಥಾನದಲ್ಲಿತ್ತು. ಆದರೆ ಇದೀಗ 7ನೇ ಸ್ಥಾನದಲ್ಲಿದೆ. ಸಕ್ರಿಯ ಕೇಸ್ಗಳ ಪೈಕಿ 3ನೇ ಸ್ಥಾನದಲ್ಲಿದ್ದ ಜಿಲ್ಲೆ ಇಂದು 10ನೇ ಸ್ಥಾನಕ್ಕೆ ತಲುಪಿದೆ. ಜಿಲ್ಲೆಯಲ್ಲಿ 136 ಕೋವಿಡ್ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಅದರಲ್ಲಿ 65 ಕೇಸ್ಗಳು ಬಿಡುಗಡೆ ಮಾಡಲಾಗಿದೆ. 4 ಸಾವು ಸಂಭವಿಸಿದೆ ಎಂದರು.
ಇನ್ನೆರಡು ದಿನಗಳಲ್ಲಿ 15 ಜನರನ್ನು ಬಿಡುಗಡೆ ಮಾಡಲಾಗುವುದು. ಇದುವರೆಗೂ 6964 ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಅದರಲ್ಲಿ 136 ಪಾಸಿಟಿವ್ ಬಂದಿದೆ. 5287 ನೆಗೆಟಿವ್ ಕೇಸ್ ಬಂದಿದೆ. 14 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. ಅದರಲ್ಲಿ ಹೆಚ್ಚಾಗಿ ಜಾಲಿನಗರ ಹಾಗೂ ಇಮಾಮ್ ನಗರದಲ್ಲಿ ಪ್ರಕರಣ ಕಂಡುಬಂದಿದೆ. 250 ಐಸೋಲೇಷನ್ ಬೆಡ್ ವಾರ್ಡ್ ಹಾಗೂ 50 ಐಸಿಯು ಬೆಡ್ ವಾರ್ಡ್ ತಯಾರು ಮಾಡಿಕೊಳ್ಳಲಾಗಿದೆ. ಜೊತೆಗೆ ಹೊರ ರಾಜ್ಯಗಳಿಂದ ಬಂದ 259 ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು.



