Connect with us

Dvgsuddi Kannada | online news portal | Kannada news online

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕೊರೊನಾಗೆ ಉಚಿತ ಚಿಕಿತ್ಸೆ

ದಾವಣಗೆರೆ

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕೊರೊನಾಗೆ ಉಚಿತ ಚಿಕಿತ್ಸೆ

ಡಿವಿಜಿ ಸುದ್ದಿ, ದಾವಣಗೆರೆ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಹೊಂದಿದವರಿಗೆ  ಕೊರೊನಾಗೆ ಸರ್ಕಾರಿ ಆಸ್ಪತ್ರೆ, ನೋಂದಾಯಿತ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ಧಾರೆ.

ಕಾರ್ಡ್ ಎಲ್ಲೆಲ್ಲಿ ಲಭ್ಯ : ಜಿಲ್ಲೆಯ ಸಾಮಾನ್ಯ ಸೇವಾ ಸಿಂಧು ಕೇಂದ್ರಗಳು, ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಬಾಪೂಜಿ ಸೇವಾ ಕೇಂದ್ರಗಳು, ಜಿಲ್ಲಾ ಆಸ್ಪತ್ರೆ ಹಾಗೂ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಕಾರ್ಡ್‍ಗಳನ್ನು ನೋಂದಾಯಿಸಬೇಕಿದೆ.  ಕಾರ್ಡ್ ಪಡೆಯಲು ಬರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು, ಕೈಗಳಿಗೆ ಸ್ಯಾನಿಟೈಸರ್ ಕಡ್ಡಾಯವಾಗಿರುತ್ತದೆ.

ಚಿಕಿತ್ಸೆಗಳ ಲಭ್ಯತೆ : ಕೋವಿಡ್ -19 ರ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ (ನಿಗದಿತ ಕೋವಿಡ್ ಆಸ್ಪತ್ರೆ) ಹಾಗೂ ಆಯುಷ್ಮಾನ್ –ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆ,  ನರ್ಸಿಂಗ್ ಹೋಂಗಳಲ್ಲಿ ಕೂಡ ಕೋವಿಡ್ ದೃಢಪಟ್ಟ ರೋಗಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.

ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಯುಷ್ಮಾನ್  ಕಾರ್ಡ್‍ಗಳನ್ನು ತ್ವರಿತವಾಗಿ ನೋಂದಾಯಿಸಿ ಪಡೆದುಕೊಳ್ಳಬಹುದು. ಈ ಯೋಜನೆಯಡಿ ನಾನ್-ಕೋವಿಡ್ ರೋಗಿಗಳಿಗೆ 1650 ಖಾಯಿಲೆಗಳಿಗೆ ಚಿಕಿತ್ಸಾ ವಿಧಾನಗಳು ಲಭ್ಯವಿದ್ದು, ಅದರಲ್ಲಿ ಸಾಮಾನ್ಯ ದ್ವಿತೀಯ ಹಂತದ 291, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸೆ ವಿಧಾನಗಳು, ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫೆರಲ್ ಚೀಟಿ ಇಲ್ಲದೇ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

2018 ರ ಅಕ್ಟೋಬರ್ ನಲ್ಲಿ  ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಆರೋಗ್ಯ ಕಾರ್ಯಕ್ರಮದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದಿರುತ್ತದೆ.  ಈ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ 1 ವರ್ಷಕ್ಕೆ ರೂ.5.00 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿರುತ್ತದೆ.

ಅದೇ ರೀತಿ ಎಪಿಎಲ್ ಕುಟುಂಬಗಳು ಚಿಕಿತ್ಸೆಗೆ ತಗುಲಿದ ಒಟ್ಟು ಬಿಲ್ಲಿನ ದರದಲ್ಲಿ ಶೇ.30 ರಷ್ಟು ವಾರ್ಷಿಕ ಪ್ರತಿ ಕುಟುಂಬಕ್ಕೆ ರೂ.1.5 ಲಕ್ಷದವರೆಗೆ ಉಚಿತವಾಗಿ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆಯನ್ನು ಪಡೆಯಬಹುದಾಗಿರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top