ಡಿವಿಜಿ ಸುದ್ದಿ, ದಾವಣಗೆರೆ: ನಗರದ ಕಾಳಿಕಾದೇವಿ ರಸ್ತೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಬೇಕು ಎಂದು ಚೌಕಿಪೇಟಿಯ ನಿವಾಸಿಗಳು ಆಗ್ರಹಿಸಿದ್ರೂ , ಸೀಲ್ ಡೌನ್ ಮಾಡ್ತಿಲ್ಲ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಚೌಕಿಪೇಟಿ ನಿವಾಸಿ ಆಲೂರು ರಾಜಶೇಖರ್, ನಗರದ ಕಾಳಿಕಾದೇವಿ ರಸ್ತೆಯ ಬಿ.ಎಸ್. ಚನ್ನಬಸಪ್ಪ ಅಂಗಡಿಯಲ್ಲಿ ಕೆಲಸ ಮಾಡುವ ಆಕೌಂಟರ್ ಗೆ ಕೊರೊನಾ ಕೊರೊನಾ ಪಾಸಿಟಿವ್ ಬಂದು ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಅಂಗಡಿಯನ್ನು ಸೀಲ್ ಡೌನ್ ಮಾಡಿ, ಕೇವಲ ಒಂದುವರೆ ಗಂಟೆಯಲ್ಲಿಯೇ ತೆರವು ಮಾಡಲಾಗಿದೆ. ಇದರ ಹಿಂದೆ ಜಿಲ್ಲಾಡಳಿತಕ್ಕೆ ರಾಜಕೀಯ ಒತ್ತಡ ಇರುವುದು ಸ್ಪಷ್ಟವಾಗುತ್ತದೆ. ಜಿಲ್ಲಾಡಳಿತ ಬಡವರಿಗೊಂದು ಕಾನೂನು, ಶ್ರೀಮಂತರಿಗೆ ಒಂದು ಕಾನೂನು ಎನ್ನುವಂತಾಗಿದೆ. ಜಿಲ್ಲಾಡಳಿತ ಕೂಡಲೇ ಕಾಳಿಕಾದೇವಿ ರಸ್ತೆ ಸಂಪೂರ್ಣ ಸೀಲ್ ಡೌನ್ ಮಾಡಬೇಕು ಎಂದು ಆಗ್ರಹಿಸಿದರು.

ಬಟ್ಟೆ ಅಂಗಡಿಗೆ ಗ್ರಾಮಾಂತರ ಪ್ರದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ . ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರಿಗೆ ಕೆಮ್ಮು, ಜ್ವರ, ಶೀತ ಪತ್ತೆಯಾದರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ, ಗ್ರಾಮಾಂತರ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ಇದರಿಂದ ಗ್ರಾಮಾಂತರ ಪ್ರದೇಶದಲ್ಲಿಯೂ ಇನ್ನಷ್ಟು ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾಡಳಿತ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ಕಾಳಿಕಾದೇವಿ ರಸ್ತೆರಯನ್ನು ಸೀಲ್ ಡೌನ್ ಮಾಡಬೇಕು ಜೊತೆಗೆ ಬಿ.ಎಸ್ . ಚನ್ನಬಸಪ್ಪ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಕೊರೊನಾ ತಪಾಸಣೆ ನಡೆಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಇಂಗಳೇಶ್ವರ್, ಸಾವಂರ್ ಜಾಧವ್, ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.



