ದಾವಣಗೆರೆಯಲ್ಲಿ ಕೊರೊನಾ ಭೀತಿ: ತೀವ್ರ ಉಸಿರಾಟ ತೊಂದರೆಯಿಂದ ಮಹಿಳೆ ಸಾವು, ಮತ್ತೆ 3 ಪಾಸಿಟಿವ್; ಇನ್ನು 298 ವರದಿ ಬಾಕಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಡಿವಿಜಿ ಸುದ್ದಿ, ದಾವಣಗೆರೆ : ದಾವಣಗೆರೆಯಲ್ಲಿ ಇಂದು ಹೊಸದಾಗಿ 03 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 55 ವರ್ಷದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರೋಗಿ ಸಂಖ್ಯೆ 694 , 55 ವರ್ಷದ ಮಹಿಳೆ ತೀವ್ರ ಉಸಿರಾಟ ತೊಂದರೆಯಿಂದ ಮೇ 3 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಇವರಿಗೆ ಕೊರೊನಾ ಪಾಸಿಟಿವ್ ಇರುವುದು ಇಂದು ದೃಢಪಟ್ಟಿದ್ದು ಇಂದು ಸಾವನ್ನಪ್ಪಿದ್ದಾರೆ. ಇವರಿಗೆ ಸಕ್ಕರೆ ಕಾಯಿಲೆ ಮತ್ತು ಬಿಪಿ ಹೈಪರ್‍ಟೆನ್ಶನ್ ಇತ್ತು.

jalingara

ರೋಗಿ ಸಂಖ್ಯೆ 695 ಫ್ಲೂ (ಐಎಲ್‍ಐ) ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹಾಗೂ ರೋಗಿ ಸಂಖ್ಯೆ 696 ಸಹ ಐಎಲ್‍ಐ ಲಕ್ಷಣಗಳಿಂದ ದಾಖಲಾಗಿದ್ದರು. ಈ ಮೂವರೂ ಜಾಲಿನಗರ ಕಂಟೈನ್‍ಮೆಂಟ್ ಝೋನ್‍ಗೆ ಒಳಪಟ್ಟವರಾಗಿದ್ದಾರೆ.
ಇಂದು 98 ಗಂಟಲುದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಒಟ್ಟು 298 ಫಲಿತಾಂಶ ಬಾಕಿ ಇದೆ. ಇಲ್ಲಿಯವರೆಗೆ 1447 ಸ್ಯಾಂಪಲ್‍ಗಳನ್ನು ಕಳುಹಿಸಲಾಗಿದೆ. 309 ಜನರನ್ನು ವಿವಿಧ ಲಾಡ್ಜ್‍ಗಳಲ್ಲಿ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ 22 ಜನರನ್ನು ಐಸೊಲೇಷನ್
ಇರಿಸಲಾಗಿದೆ. ಹಾಗೂ ಇಂದು ಎರಡು ಮೆಡಿಕಲ್ ಕಾಲೇಜು ಮತ್ತು ಸಿಜಿ ಆಸ್ಪತ್ರೆ ವೈದ್ಯರ ಸಭೆ ಕರೆದು ಸಿಜಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಚಿಕಿತ್ಸೆ ಬಗ್ಗೆ ಚರ್ಚಿಸಲಾಯಿತು. ಹಾಗೂ ಸಿಜಿ ಆಸ್ಪತ್ರೆಯಲ್ಲಿನ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಉಸಿರಾಟ ತೊಂದರೆಗೆ ತಜ್ಞ ವೈದ್ಯರ ತಂಡ : ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಜನರ ತಜ್ಞ ವೈದ್ಯರ ತಂಡವನ್ನು ಇಂದಿನಿಂದಲೇ ರಚಿಸಿ ಇಂದು ವರದಿಯಾಗಿರುವ 15 ತೀವ್ರ ಉಸಿರಾಟದ ತೊಂದರೆ ಇರುವ ಪ್ರಕರಣಗಳನ್ನು ದಿನದಲ್ಲಿ 3 ಬಾರಿ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.
ಜಾಲಿನಗರದಲ್ಲಿ 39 ಮತ್ತು ಬಾಷಾನಗರದಲ್ಲಿ 33 ಐಎಲ್‍ಐ ಪ್ರಕರಣಗಳು ಇಂದು ಕಂಡು ಬಂದಿದ್ದು, ಇವರ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜನರು ಐಎಲ್‍ಐ ಮತ್ತು ಉಸಿರಾಟದ ತೊಂದರೆಗಳನ್ನು ಮುಚ್ಚಿಡುವ ಸಾಧ್ಯತೆ ಇರುವುದರಿಂದ ಐಎಲ್‍ಐ ಮತ್ತು ಸಾರಿ ಪ್ರಕರಣಗಳನ್ನು ಪತ್ತೆ ಹಚ್ಚಲು ಎಲ್ಲ ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಸರ್ವೇ ನಡೆಸಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಈಗಾಗಲೇ ಎಲ್ಲ ಕಂಟೈನ್‍ಮೆಂಟ್ ಜೋನ್‍ಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಎಲ್ಲ ಕಡೆಯಲ್ಲಿಯೂ ಸ್ಟೀಲ್ ಬ್ಯಾರಿಕೇಡ್ ಬಳಸಿ ನಿಯಂತ್ರಣ ಮಾಡಲಾಗಿದೆ. ಮನೆ ಮನೆಗಳಿಗೆ ಸರ್ವೇ ಮಾಡಲು ಪೊಲೀಸ್ ಸಿಬ್ಬಂದಿಗಳು ತೆರಳುತ್ತಿದಾರೆ. ಈ ಕಂಟೈನ್‍ಮೆಂಟ್ ಜೋನ್‍ಗೆ ಸಂಬಂಧಿಸಿದಂತೆ ತಲಾ ಐವರು ಇನ್ಸಿಡೆಂಟ್ ಕಮಾಂಡರ್ ಮತ್ತು ಇನ್‍ಸ್ಪೆಕ್ಟರ್ ನೇಮಕ ಮಾಡಲಾಗಿದೆ. ಈ ಐವರು ಇನ್‍ಸ್ಪೆಕ್ಟರ್‍ಗಳು ಆ ಏರಿಯಾದಲ್ಲಿ ಬಿಗಿ ಬಂದೊಬಸ್ತ್ ಮಾಡಿಕೊಳ್ಳುತ್ತಾರೆ. ಆ ಏರಿಯಾಕ್ಕೆ ಹೋಗಲು ಮತ್ತು ಬರಲು ಒಂದೇ ಗೇಟ್ ತೆರೆಯಲಾಗಿದ್ದು, ಅಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಜೊತೆಗೆ ಜನರಿಗೆ ಬೇಕಾದಂತಹ ಎಲ್ಲಾ ಅಗತ್ಯ ವಸ್ತು ಹಾಗೂ ಅಲ್ಲಿಯೇ ಸರಬರಾಜು ಮಾಡುವಂತೆ ನೋಡಿಕೊಳ್ಳಲಾಗಿದ್ದು ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಒಂದೇ ಪ್ರವೇಶ ಮತ್ತು ಹೊರ ಬರುವ ಗೇಟ್ ವ್ಯವಸ್ಥೇ ಮಾಡಲಾಗಿದೆ ಎಂದರು.

ಹೊರರಾಜ್ಯದಲ್ಲಿ ನಮ್ಮ ಜಿಲ್ಲೆಗೆ ಬರುವವರ ಹಾಗೂ ನಮ್ಮ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳುವವರ ಪಟ್ಟಿಯನ್ನು ನಿಯಮಾನುಸಾರ ತಯಾರಿಸಲಾಗಿದೆ. ಒಂದು ತಾಲ್ಲೂಕಿನಲ್ಲಿ ರಿಸೀವಿಂಗ್ ಪಾಯಿಂಟ್ ಗುರುತಿಸಿ ಇವರನ್ನು ಬರಮಾಡಿಕೊಂಡು ಅಲ್ಲಿಯೇ ಸ್ಕ್ರೀನಿಂಗ್ ಮತ್ತು ತಪಾಸಣೆ ನಡೆಸಿ ಇವರನ್ನು 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಹೊರ ರಾಜ್ಯಕ್ಕೆ ತೆರಳುವವರು ತಮ್ಮ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಹಾಗೂ ಹೊರ ರಾಜ್ಯದಿಂದ ತಮ್ಮನ್ನು ಕರೆಯಿಸಿಕೊಳ್ಳಲು ಅನುಮೋದನೆ ಬಂದ ನಂತರವೇ ಕಳುಹಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *