Connect with us

Dvgsuddi Kannada | online news portal | Kannada news online

ಕೊರೊನಾ ಸೋಂಕಿಗೆ ಹೆದರಿ ಇಬ್ಬರು ವೈದ್ಯರು ಆಸ್ಪತ್ರೆಯಿಂದ ನಾಪತ್ತೆ

ಪ್ರಮುಖ ಸುದ್ದಿ

ಕೊರೊನಾ ಸೋಂಕಿಗೆ ಹೆದರಿ ಇಬ್ಬರು ವೈದ್ಯರು ಆಸ್ಪತ್ರೆಯಿಂದ ನಾಪತ್ತೆ

ಡಿವಿಜಿ ಸುದ್ದಿ, ಕಾರವಾರ: ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ತರಬೇತಿ ಪಡೆಯುತ್ತಿದ್ದ ಇಬ್ಬರು ವೈದ್ಯರು ಸೋಂಕಿಗೆ ಹೆದರಿ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಕಾರವಾರದ ನೌಕಾನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಗೆ ಕೊರೊನಾ ಸೋಂಕಿತ ಆರು ಜನ ರೋಗಿಗಳಿದ್ದು, ಇವರಿಗೆ ಚಿಕಿತ್ಸೆ ಕೊಡಲು ತರಬೇತಿ ನೀಡಿ ಇಬ್ಬರು ವೈದ್ಯರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಕಾರ್ ಪಾರ್ಕ್ ಮಾಡಿ ಬರುವುದಾಗಿ ಹೇಳಿ ಹೋದ ಈ ವೈದರು ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ.

ಕರ್ತವ್ಯ ಲೋಪ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿ.ಇ.ಒ ಆರ್.ರೋಷನ್ ರಿಂದ ನೋಟಿಸ್ ನೀಡಿದ್ದು,  ಏಳು ದಿನದಲ್ಲಿ ಉತ್ತರ ನೀಡಬೇಕಿದೆ. ಇದಲ್ಲದಿದ್ದಲಗ್ಲಿ  ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top