Connect with us

Dvgsuddi Kannada | online news portal | Kannada news online

ಕೊರೊನಾ ಭೀತಿ: ದಾವಣಗೆರೆ ಸಂಪೂರ್ಣ ಬಂದ್; ಕದ್ದುಮುಚ್ಚಿ ವ್ಯಾಪಾರ ಮಾಡುವರಿಗೆ ಬಿತ್ತು ಲಾಠಿ ಏಟು ..!

ಪ್ರಮುಖ ಸುದ್ದಿ

ಕೊರೊನಾ ಭೀತಿ: ದಾವಣಗೆರೆ ಸಂಪೂರ್ಣ ಬಂದ್; ಕದ್ದುಮುಚ್ಚಿ ವ್ಯಾಪಾರ ಮಾಡುವರಿಗೆ ಬಿತ್ತು ಲಾಠಿ ಏಟು ..!

 ಡಿವಿಜಿ ಸುದ್ದಿ, ದಾವಣಗೆರೆ: ಇಡೀ ದೇಶದಾದ್ಯಂತ ಕೊರೊನಾ ಭೀತಿ ಉಂಟಾಗಿದ್ದು, ಮಾ. 31 ವರೆಗೆ ರಾಜ್ಯದಲ್ಲಿ ಬಂದ್ ಘೋಷಣೆ ಮಾಡಲಾಗಿದೆ. ಇಡೀ ರಾಜ್ಯ ಬಂದ್ ಗೆ ಜಿಲ್ಲೆಯ ಜನರು ಸ್ಪಂದಿಸಿದ್ದು, ಎಲ್ಲಾ ಅಂಗಡಿ ಮುಂಗಟ್ಟು ಕ್ಲೋಸ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

dc sp 3

ಇನ್ನು ನಗರದ ಮಂಡಿಪೇಟೆ, ಚಾಮರಾಜಪೇಟೆಯಲ್ಲಿ ಕದ್ದುಮುಚ್ಚಿ ವ್ಯಾಪಾರ ನಡೆಸುತ್ತಿದ್ದವರನ್ನು ಕಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅಂಗಡಿ ಒಳಗೆ ನುಗ್ಗಿ ಲಾಠಿ ಏಟಿನ ರುಚಿ ತೋರಿಸಿ,  ಅಂಗಡಿ ಲಾಕ್ ಮಾಡಿಸಿದ್ರು.

dc sp

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ  ನೇತೃತ್ವದಲ್ಲಿ ಸಿಟಿ ರೌಂಡ್ಸ್ ಕೈಗೊಳ್ಳಲಾಗಿತ್ತು. ಈ ವೇಳೆ  ಕೆಲವರು ಬಾಗಿಲು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದರು. ಆಗ ಅಂಗಡಿ ಒಳಗೆ ನುಗ್ಗಿದ  ಎಸ್ ಪಿ  ಹನಮಂತರಾಯ,  ಗೌಡರ ಜಯದೇವಪ್ಪ ಬಟ್ಟೆ ಅಂಗಡಿ ಸೇರಿದಂತೆ ಕೆಲವು ವ್ಯಾಪಾರಿಗಳಿಗೆ  ಲಾಠಿಯಲ್ಲಿ ಥಳಿಸಿದರು.  ಕೊರೊನಾ ಜಾಗೃತಿ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಲ್ವಾ ನೀವು..? ಎಂದು ಹೊರೆಗೆ ಎಳೆತಂದು ಅಂಗಡಿ ಮುಚ್ಚಿಸಿದರು.

dc sp 4

ಇನ್ನು ನಗರದಲ್ಲಿ ಅನವಶ್ಯಕವಾಗಿ ಓಡಾಟ ನಡೆಸುತ್ತಿದ್ದವರಿಗೆ ತಿಳಿ ಹೇಳಿ ಮನೆಗೆ ಕಳುಹಿಸಲಾಯಿತು. ಅಗತ್ಯ ವಸ್ತುಗಳ ಮಾರಾಟ ಹೊರತುಪಡಿಸಿ ಇನ್ನುಳಿದ ಎಲ್ಲಾ ಅಂಗಡಿಗಳನ್ನು ಲಾಕ್  ಮಾಡಲಾಗಿತ್ತು.

dc sp 5

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top