Connect with us

Dvgsuddi Kannada | online news portal | Kannada news online

ಕೊರೊನಾ ವೈರಸ್ : ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ನತ್ತ ದಾವಣಗೆರೆ; ಘೋಷಣೆಯಷ್ಟೇ ಬಾಕಿ

ಪ್ರಮುಖ ಸುದ್ದಿ

ಕೊರೊನಾ ವೈರಸ್ : ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ನತ್ತ ದಾವಣಗೆರೆ; ಘೋಷಣೆಯಷ್ಟೇ ಬಾಕಿ

ಡಿವಿಜಿ ಸುದ್ದಿ, ದಾವಣಗೆರೆ: ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆ ಕೊರೊನಾ ಮುಕ್ತ ಜಿಲ್ಲೆಯಾಗಿ ಘೋಷಣೆಯಾಗಿದ್ದು, ಇದೀಗ ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ನತ್ತ  ಸಾಗಿದೆ.

coronavirus davangere

ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿದ್ದವು. ಈ ಮೂರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ನಿಯಮದ ಪ್ರಕಾರ ಕೊನೆಯ ಪಾಸಿಟಿವ್ ಪ್ರಕರಣ ವರದಿಯಾದ ನಂತರ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದಿದ್ದರೆ ಅದನ್ನು ಗ್ರೀನ್ ಝೋನ್ ಗೆ ಸೇರಿಸಲಾಗುತ್ತದೆ. ಹೀಗಾಗಿ ದಾವಣಗೆರೆ ಜಿಲ್ಲೆ ಸದ್ಯ ಸೇಫ್ ಝೋನ್ ನಲ್ಲಿದೆ.

corona

ಹಸಿರು ಝೋನ್‍ನಲ್ಲಿದ್ದ ಜಿಲ್ಲೆಗಳು ಒಟ್ಟಿಗೇ ಅಲರ್ಟ್ ಜೋನ್‍ಗಳಲ್ಲಿ ಬರಬಹುದು. ಹಾಗಾಗಿ ಬಹಳ ಎಚ್ಚರಿಕೆಯಿಂದ ಶ್ರಮ ವಹಿಸಬೇಕಾಗಿದೆ.ಆದರೆ ಸದ್ಯಕ್ಕಂತೂ ಜಿಲ್ಲೆಯ ಜನ ನಿಟ್ಟಿಸುರು ಬಿಟ್ಟಿದ್ದಾರೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ಕಾರ್ಯ ವೈಕರಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

dc meeting

ಮಾರ್ಚ್ 23 ರಂದು ಕೊರೊನಾ ಮೊದಲ ಪ್ರಕರಣ ಚಿತ್ರದುರ್ಗ ಜಿಲ್ಲೆಯದ್ದಾಗಿದ್ದರೂ ತಾಂತ್ರಿಕವಾಗಿ ದಾವಣಗೆರೆಗೆ ಸೇರಿತು. ನಂತರ ಮಾರ್ಚ್ 27 ರಂದು ಫ್ರಾನ್ಸ್‍ನಿಂದ ಆಗಮಿಸಿದ ಯುವಕನಲ್ಲಿ ಸೋಂಕು ಕಾಣಿಸಿಕೊಂಡು ಕೇಸ್ ಎರಡಾಯಿತು. ನಂತರ ಅಮೆರಿಕದಿಂದ ಆಗಮಿಸಿದ್ದ ಯುವಕನಲ್ಲಿ ಸೋಂಕು ದೃಢಪಟ್ಟು ಆ ಸಂಖ್ಯೆ ಮೂರಕ್ಕೇರಿದ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನರಲ್ಲಿ ಆತಂಕ ಮೂಡಿತ್ತು.

dc cg Hospital visit

ಇದರಿಂದ ಜನರಲ್ಲಿ ಜಾಗೃತಿ ಹೆಚ್ಚಾಗತೊಡಗಿತು. ಇದೇ ವೇಳೆ ಘೋಷಣೆಯಾದ ಲಾಕ್‍ಡೌನ್ ಬಹಳ ಕಟ್ಟುನಿಟ್ಟಾಗಿ ಜಾರಿಯಾಗುವುದರೊಂದಿಗೆ ಯುದ್ದೋಪಾದಿಯಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸಿ ಸೋಂಕು ಮುಕ್ತವವಾಗುವವರೆಗೆ ಅವಿರತ ಶ್ರಮಿಸಿದ್ದು ಎಲ್ಲೋ ಒಂದು ಕಡೆ ಫಲ ನೀಡಿದೆ.

dc cg Hospital visit 2

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಆರೋಗ್ಯ ಇಲಾಖೆಯ ತಂಡ ವಹಿಸಿದ್ದ ಮುನ್ನೆಚ್ಚರಿಕೆ ಅಷ್ಟಿಷ್ಟಲ್ಲ. ಅದರೊಡನೆ ಎಲ್ಲಾ ಇಲಾಖೆ ಅಧಿಕಾರಿಗಳೂ ನೀಡಿದ ಸಾಥ್ ಕೂಡ ಅಷ್ಟೇ ಪ್ರಮುಖ ಪಾತ್ರ ವಹಿಸಿದೆ. ಕೇಂದ್ರ ಆರೋಗ್ಯ ಇಲಾಖೆ ಜಿಲ್ಲೆಯನ್ನು ಗ್ರೀನ್ ಝೋನ್ ಎಂದು ಘೋಷಣೆ ಮಾಡುವುದಷ್ಟೇ ಬಾಕಿ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top