ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ 44 ಕೊರೊನಾ ಪ್ರಕರಣ ಪತ್ತೆ ಹಿನ್ನೆಲೆ 5 ಕಂಟೈನ್ಮೆಂಟ್ ಜೋನ್ಗಳನ್ನು ಸೀಲ್ಡೌನ್ ಮಾಡಲಾಗಿದೆ. ಎಲ್ಲ ಕಡೆಯಲ್ಲಿಯೂ ಸ್ಟೀಲ್ ಬ್ಯಾರಿಕೇಡ್ ಬಳಸಿ ನಿಯಂತ್ರಣ ಮಾಡಲಾಗಿದೆ. ಆ ಏರಿಯಾಕ್ಕೆ ಹೋಗಲು ಮತ್ತು ಬರಲು ಒಂದೇ ಗೇಟ್ ತೆರೆಯಲಾಗಿದ್ದು, ಅಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಂಟೈನ್ಮೆಂಟ್ ಜೋನ್ ಜಾಲಿನರ ಪರಿಶೀಲನೆ ನಂತರ ಮಾತನಾಡಿ, ಕಂಟೈನೆ ಮೆಂಟ್ ಗೆ ಸಂಬಂಧಿಸಿದಂತೆ ತಲಾ ಐವರು ಕಮಾಂಡರ್ ಮತ್ತು ಇನ್ಸ್ಪೆಕ್ಟರ್ ನೇಮಕ ಮಾಡಲಾಗಿದೆ. ಈ ಐವರು ಇನ್ಸ್ಪೆಕ್ಟರ್ಗಳು ಆ ಏರಿಯಾದಲ್ಲಿ ಬಿಗಿ ಬಂದೊಬಸ್ತ್ ಮಾಡಿಕೊಳ್ಳುತ್ತಾರೆ.. ಜೊತೆಗೆ ಜನರಿಗೆ ಬೇಕಾದಂತಹ ಎಲ್ಲಾ ಅಗತ್ಯ ವಸ್ತು ಹಾಗೂ ಔಷಧಗಳನ್ನು ಅಲ್ಲಿಯೇ ಸರಬರಾಜು ಮಾಡುವಂತೆ ನೋಡಿಕೊಳ್ಳಲಾಗಿದೆ ಎಂದರು.

ಜ್ವರ ಇದ್ದವರು ಮನೆಯಲ್ಲಿಯೇ ಇರುವ ಹಿನ್ನೆಲೆ ಕಾರ್ಯಾಚರಣೆ: ಈ 5 ಕಂಟೈನ್ಮೆಂಟ್ ಜೋನ್ಗಳಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸರ್ವೇಕ್ಷಣಾಧಿಕಾರಿಗಳು ಮನೆ ಮನೆಗೆ ಹೋಗಿ ಸಾರಿ ಹಾಗೂ ಐಎಲ್ಐ ಲಕ್ಷಣ ಇರುವವರನ್ನು ಪತ್ತೆ ಮಾಡಿ ಅವರ ಗಂಟಲು ದ್ರವ ಸಂಗ್ರಹಿಸಿ ಚಿಕಿತ್ಸೆ ಹಾಗೂ ಐಸೋಲೇಟ್ ಮಾಡುವುದು ಬಹಳ ಮುಖ್ಯವಾದ ಕೆಲಸವಾಗಿದೆ. ಜೊತೆಗೆ ಕೆಲವರು ಜ್ವರ ಇದ್ದವರು ಮಾತ್ರೆ ತೆಗೆದುಕೊಂಡು ಮನೆಯಲ್ಲಿಯೇ ಇರುವ ಬಗ್ಗೆ ಮಾಹಿತಿ ಬಂದಿದೆ. ಅದರ ಆಧಾರದ ಮೇಲೆ ಈ ಕಾರ್ಯಚರಣೆ ಮಾಡಲಾಗಿದ್ದು, ಆ ಮೂಲಕ ಲಕ್ಷಣ ಇರುವವರನ್ನು ನಾವು ಚಿಕಿತ್ಸೆಗೆ ಒಳಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಅನಾವಶ್ಯಕ ಸಂಚರಿಸದೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆವರೆಗಿನ ಅವಧಿಯಲ್ಲಿ ತಮಗೆ ಏನು ಬೇಕು ಅದನ್ನು ತೆಗೆದುಕೊಂಡು ಮನೆಯಲ್ಲಿಯೇ ಇರಬೇಕು. ಇಡೀ ದಿನ ಸಮ್ಮನೆ ಸುತ್ತಾಡುವುದನ್ನು ನಿಯಂತ್ರಿಸಲು ಬಹಳ ಅಚ್ಚುಕಟ್ಟಾಗಿ ಜಿಲ್ಲೆಯ ನಾಗರಿಕರ ಸಲಹೆ ಮೇರೆಗೆ ಈ ಸಮಯ ಜಾರಿ ಮಾಡಲಾಗಿದೆ. ಸೋಂಕು ಹರಡವುದನ್ನು ನಿಯಂತ್ರಿಸುವ ವಿಶ್ವಾಸವಿದೆ. ಈ ಹಿನ್ನೆಲೆಯಲ್ಲಿ ಗಂಭೀರ ಪರಿಸ್ಥಿತಿ ಆಗಿರುವುದರಿಂದ ಇನ್ನೂ 20 ದಿನ ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸೊಂಕಿನ ಮೂಲದ ಕುರಿತು ಮುಖ್ಯವಾಗಿ ಹಾಸನ, ಚಿತ್ರದುರ್ಗ, ಬಳ್ಳಾರಿ ಹಾಗೂ ಬಾಗಲಕೋಟೆಗೆ ಗೂಡ್ಸ್ ವಾಹನದಲ್ಲಿ ಹೋಗಿ ಬಂದಂತಹವರ ಮಾಹಿತಿ ಸಿಕ್ಕಿದೆ. ಈರುಳ್ಳಿ ತುಂಬಿದ ಲಾರಿಗಳಲ್ಲಿ ಹೋಗಿ ಬಂದವರಿಗೆ ಲಕ್ಷಣ ಕಂಡುಬಂದಿದೆ. ಅದನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಇನ್ನೂ ಸ್ಪಲ್ಪ ಸಮಯ ಬೇಕಾಗಿದೆ. ವೈದ್ಯಾಧಿಕಾರಿಗಳ ಸಹಾಯದಿಂದ ವಿಚಾರಣೆ ಮಾಡಿ ಕೂಡಲೇ ಪತ್ತೆ ಹಚ್ಚಲಾಗುವುದು ಎಂದು ಮಾಹಿತಿ ಒದಗಿಸಿದರು.



