Connect with us

Dvgsuddi Kannada | online news portal | Kannada news online

ರಾಜ್ಯ ಸರ್ಕಾರದಿಂದ ಮಾರ್ಗ ಸೂಚಿ ಬಿಡುಗಡೆ: ನಾಳೆಯಿಂದ ಬಸ್, ರೈಲು, ಸಲೂನ್ ಶಾಪ್ ಓಪನ್

ಪ್ರಮುಖ ಸುದ್ದಿ

ರಾಜ್ಯ ಸರ್ಕಾರದಿಂದ ಮಾರ್ಗ ಸೂಚಿ ಬಿಡುಗಡೆ: ನಾಳೆಯಿಂದ ಬಸ್, ರೈಲು, ಸಲೂನ್ ಶಾಪ್ ಓಪನ್

ಡಿವಿಜಿ ಸುದ್ದಿ, ಬೆಂಗಳೂರು: ಲಾಕ್‍ಡೌನ್ 4.0ಗೆ ಸಬಂಧಿಸಿದಂತೆ ರಾಜ್ಯ ಸರ್ಕಾರ ಇಂದು ಮಾರ್ಗಸೂಚಿ ರಚಿಸಿದೆ.   ನಾಳೆಯಿಂದ ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್, ರೈಲು, ಸಂಚಾರ ಆರಂಭವಾಗಲಿದೆ. ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದ ಕಡೆ ಸಂಚಾರ ನಡೆಸಲಿವೆ.

railway 1

ಇನ್ನು ಎಲ್ಲ ಪಾರ್ಕ್ ಗಳಲ್ಲಿ ಬೆಳಗ್ಗೆ 7 ರಿಂದ 9 ಹಾಗೂ  ಸಂಜೆ 5 ರಿಂದ 7 ಗಂಟೆ ವರೆಗೆ  ತೆರೆದಿರುತ್ತವೆ. ಎಲ್ಲ ವ್ಯಾಪಾರಿಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇನ್ನು ಪ್ರತಿ ಭಾನುವಾರ ಕಂಪ್ಲೀಟ್ ಲಾಕ್‍ಡೌನ್ ಇರಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ ಎಂದು ಮಾರ್ಗ ಸೂಚಿಯಲ್ಲಿ ತಿಳಿಸಿದ್ದಾರೆ.

ಅಂತರ್ ರಾಜ್ಯ ಸಂಚಾರಕ್ಕಿಲ್ಲ ಅನುಮತಿ

ಇನ್ನು ಬಸ್ ಗಳಲ್ಲಿ 30 ಜನರಿಗೆ ಪ್ರಯಾಣಿಸಲು ಮಾತ್ರ ಅವಕಾಶ ನೀಡಲಾಗಿದೆ. ತುರ್ತು ಸಂದರ್ಭ ಹೊರತುಪಡಿಸಿ ಅಂತರ್ ರಾಜ್ಯ ಸಂಚಾರ ಇರಲ್ಲ. ಈ ಕುರಿತು ಮೇ 31ರ ನಂತರ  ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದರು.

yeddiyurapp pc

ಮದುವೆಗಳಲ್ಲಿ 50 ಜನಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆಟೋ, ಕ್ಯಾಬ್‍ಗಳಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಟೋ, ಟ್ಯಾಕ್ಸಿಗಳಲ್ಲಿ ಚಾಲಕ ಹೊರತು ಪಡಿಸಿ ಇಬ್ಬರು ಪ್ರಯಾಣ ಮಾಡಬಹುದು. ಮ್ಯಾಕ್ಸಿಕ್ಯಾಬ್ ನಲ್ಲಿ ಚಾಲಕ ಹೊರತು ಪಡಿಸಿ ಮೂವರು ಪ್ರಯಾಣ ಮಾಡಬಹುದು.  ಸಂಜೆ 7 ರಿಂದ ಬಳಗ್ಗೆ 7ರವರೆಗೆ ಕಫ್ರ್ಯೂ ಮುಂದುವರಿಯಲಿದೆ.

davangere police

ಜಿಮ್, ಚಿತ್ರ ಮಂದಿರ, ಮಾಲ್  ತೆರೆಯುವಂತಿಲ್ಲ

ಜಿಮ್ ಓಪನ್ ಮಾಡುವಂತಿಲ್ಲ, ಜಿಮ್, ಮಾಲ್ ತೆರೆಯುವಂತಿಲ್ಲ. ಕ್ರೀಡಾಂಗಣ ತೆರೆದರೂ ಗುಂಪು ಗುಂಪಾಗಿ ಸೇರುವಂತಿಲ್ಲ. ಪಾನಿಪುರಿ, ಫಾಸ್ಟ್ ಫುಡ್ ಸೇರಿದಂತೆ ಬೀದಿ ಬದಿ ವ್ಯಾಪಾರ ನಡೆಸಬಹುದಾಗಿದೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top