Connect with us

Dvgsuddi Kannada | online news portal | Kannada news online

ಕಂಟೈನ್ ಮೆಂಟ್ ಝೋನ್ ಗಳಿಗೆ ಅಗತ್ಯ ವಸ್ತು ಪೂರೈಕೆಯಲ್ಲಿ ಜಿಲ್ಲಾಡಳಿತ, ಪಾಲಿಕೆ ವಿಫಲ; ಎ. ನಾಗರಾಜ್

ಪ್ರಮುಖ ಸುದ್ದಿ

ಕಂಟೈನ್ ಮೆಂಟ್ ಝೋನ್ ಗಳಿಗೆ ಅಗತ್ಯ ವಸ್ತು ಪೂರೈಕೆಯಲ್ಲಿ ಜಿಲ್ಲಾಡಳಿತ, ಪಾಲಿಕೆ ವಿಫಲ; ಎ. ನಾಗರಾಜ್

ಡಿವಿಜಿ ಸುದ್ದಿ, ದಾವಣಗೆರೆ: ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿರುವ ಜಾಲಿನಗರ ಕಂಟೈನ್ ಮೆಂಟ್ ಝೋನ್ ಗಳಿಗೆ ಅಗತ್ಯ ವಸ್ತು ಪೂರೈಸುವಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಾಲಿನಗರ ವಾರ್ಡ್ ನಲ್ಲಿ ಏಳೆಂಟು ಕಂಟೈನ್ ಮೆಂಟ್ ಝೋನ್ ಗಳಿವೆ. ಒಂದೊಂದು ಕಂಟೈನ್ ಮೆಂಟ್ ಝೋನ್ ನಲ್ಲಿ 50 ರಿಂದ 60 ಮನೆಗಳಿವೆ. ಈ ಪ್ರದೇಶಗಳು ಕಳೆದ 2 ತಿಂಗಳಿಂದ ಸೀಲ್ ಡೌನ್ ಆಗಿವೆ. ಇಲ್ಲಿನ ಜನ ಪ್ರತಿ ದಿನ ದುಡಿದರಷ್ಟೇ ಅವರ ಬಳಿ ಹಣ. ಕಳೆದ ಎರಡು ತಿಂಗಳಿಂದ ಯಾವುದೇ ದುಡಿಮೆ  ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಅಗತ್ಯ ವಸ್ತುಗಳಾದ ತರಕಾರಿ,ಹಾಲು, ರೇಷನ್ ಕಿಟ್ ಗಳನ್ನಾದರೂ  ಜಿಲ್ಲಾಡಳಿತ ಮತ್ತು ಪಾಲಿಕೆ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.

ದಾವಣಗೆರೆಯಲ್ಲಿ 3 ಕೊರೊನಾ ಲ್ಯಾಬ್ ಗಳಿದ್ದು, ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಹೆಚ್ಚಾಗುತ್ತಿದ್ದಾರೆ. ಹೀಗಾಗಿ ಎಲ್ಲಾ ವಾರ್ಡ್ ಗಳಲ್ಲಿ ಮಾದರಿ ಪರೀಕ್ಷೆಗೆ ಮುಂದಾಗಬೇಕು. ಜಿಲ್ಲೆಯ ಮೂರು ಟೆಸ್ಟಿಂಗ್ ಲ್ಯಾಬ್ ಗಳಲ್ಲಿ 300 ಟೆಸ್ಟ್ ಮಾಡುವ ಸಾಮರ್ಥ್ಯ ಇದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿಗುಡಾಳ್ ಮುಂಜುನಾಥ್, ಕೆ. ಚಮನ್ ಸಾಬ್, ವಿನಾಯಕ್ ಪೈಲ್ವಾನ್ , ಸೈಯದ್ ಚಾರ್ಲಿ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top